ಪ್ರಜಾಪ್ರಭುತ್ವದ ಉಳಿವಿಗೆ ಪತ್ರಿಕಾರಂಗದ ಸೇವೆ ಶ್ಲಾಘನೀಯ-ಡಾ.ಕೆ.ಗುರಲಿಂಗಪ್ಪ

ಶಹಾಬಾದ: ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೂ ಪ್ರಜಾಪ್ರಭುತ್ವದ ಉಳಿವಿಗೆ ಸಾಕಷ್ಟು ಶ್ರಮವಹಿಸುತ್ತಿರುವ ಪ್ರಜಾಪ್ರಭುತ್ವದ ಕಾವಲುನಾಯಿ ಎಂದೇ ಕರೆಯಲ್ಪಡುವ ಪತ್ರಿಕಾರಂಗದ ಸೇವೆ ಶ್ಲಾಘನೀಯವಾದುದು ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹೇಳಿದರು.

ಅವರು ಮಂಗಳವಾರ ನಗರಸಭೆಯ ಸಭಾಂಗಣದಲ್ಲಿ ಆಯೋಜಿಸಲಾದ ತಾಲೂಕಾ ಕಾರ್ಯನಿರತ ಪತ್ರಕರ್ತ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳನ್ನು ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗುತ್ತದೆ.ಸರಕಾರ ಮತ್ತು ಜನತೆಯ ನಡುವೆ ಮಾಧ್ಯಮಗಳು ಸೇತುವೆಗಳಾಗಿ ಕೆಲಸ ಮಾಡುತ್ತವೆ.ಸಂವಿಧಾನಬದ್ಧ ಆಡಳಿತ ಸಂಸ್ಥೆಗಳು ಹದ್ದುಮೀರಿದಾಗ ಅವುಗಳ ಹೊಣೆಗಾರಿಕೆಯನ್ನು ನೆನಪಿಸುವ ಹಾಗೂ ಸರಿದಾರಿಗೆ ಬರುವಂತೆ ಕೆಲಸ ಮಾಡುತ್ತಿದೆ ಎಂದರು. ಪತ್ರಕರ್ತರು ಸಮಾಜದ ಒಳಿತಿಗಾಗಿ ಹೊಸತನವನ್ನು ನೀಡುವಲ್ಲಿ ಸಫಲರಾಗಬೇಕು.ಪ್ರತಿನಿತ್ಯದ ಎಲ್ಲಾ ಆಗು ಹೋಗುಗಳನ್ನು ತಿಳಿಯಬೇಕಾದರೆ ಅದು ಮಾಧ್ಯಮದಿಂದ ಸಾಧ್ಯ. ಸತ್ಯವನ್ನು ಮರೆಮಾಚದೇ ಸಮಾಜ ಬದಲಾವಣೆಯ ಸುದ್ದಿಗಳು ಹೆಚ್ಚು ಪ್ರಕಟಗೊಂಡಾಗ ಸಮಾಜ ಎಚ್ಚರದಲ್ಲಿರುತ್ತದೆ. ಸತ್ಯ, ಪ್ರಾಮಾಣಿಕತೆ, ದಕ್ಷತೆಯಿಂದ ಸಮಾಜದ ಓರೆ ಕೋರೆಗಳನ್ನು ತಿದ್ದುವ ಕೆಲಸ ಪತ್ರಕರ್ತರಿಂದಾಗಲಿ ಹಾಗೂ ತಾಲೂಕಿನ ಅಭಿವೃದ್ಧಿಗೆ ಉತ್ತಮ ಲೇಖನಗಳು ತಮ್ಮಿಂದ ಹೊರಬರಲಿ ಎಂದು ಹೇಳಿದರು.

ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ರಮೇಶ ಭಟ್ಟ ಮಾತನಾಡಿ, ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಪ್ರಜಾಪ್ರಭುತ್ವದ ಮೂರು ಅಂಗಗಳಾದರೆ ನಾಲ್ಕನೇ ಅಂಗವೇ ಪತ್ರಿಕಾರಂಗ.ಇಂದು ಸಾಮಾಜಿಕ ಜಾಲತಾಣಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರಸಕ್ತ ಕಾಲಘಟ್ಟದಲ್ಲಿ ಮುದ್ರಣ ಮಾಧ್ಯಮಕ್ಕೆ ಸವಾಲಾಗಿದ್ದು, ವರದಿಗಾರರು ಕ್ಲಿಷ್ಟಕರ ಸನ್ನವೇಶದಲ್ಲಿ ಕಾರ್ಯನಿರ್ವಹಿಸುತ್ತಾರೆ. ದೇಶದಲ್ಲಿನ ಪತ್ರಿಕೆಯ ದರ ವಿದೇಶದಲ್ಲಿನ ಪತ್ರಿಕೆಯ ದರಕ್ಕಿಂತ ಬಹಳಷ್ಟು ಕಡಿಮೆಯಿದೆ. ಇಂದು ಪತ್ರಿಕೆಗಳು ಉಳಿಯಬೇಕಾದರೆ ಜನರು ಪತ್ರಿಕೆಯನ್ನು ಕೊಂಡು ಓದುವ ಹವ್ಯಾಸವನ್ನು ರೂಢಿಸಿಕೊಂಡಾಗ ಪತ್ರಿಕೆ ಬೆಳೆಯುತ್ತದೆ ಎಂದರು.

ಪತ್ರಕರ್ತರಾದ ವಾಸುದೇವ ಚವ್ಹಾಣ ನಿರೂಪಿಸಿದರು, ಮಲ್ಲಿನಾಥ ಪಾಟೀಲ ಸ್ವಾಗತಿಸಿದರು, ರಘುವೀರಸಿಂಗ ಠಾಕೂರ ವಂದಿಸಿದರು.
ಚಿತ್ತಾಪೂರ ಪಿಎಲ್ಡಿ ಬ್ಯಾಂಕಿನ ಉಪಾಧ್ಯಕ್ಷ ರಾಚಪ್ಪ ಅಲ್ಲಂಶೆಟ್ಟಿ,ಸುಭಾಷ ಜಾಪೂರ, ಬಸವರಾಜ ಬಿರಾದಾರ, ಶರಣು ಪಗಲಾಪೂರ,ಸಾಹೇಬಗೌಡ ಬೋಗುಂಡಿ, ಸೂರ್ಯಕಾಂತ ಕೋಬಾಳ, ರಾಜೇಶ ಯನಗುಂಟಿಕರ್, ಬಸವರಾಜ ಮದ್ರಿಕಿ, ಜಗನ್ನಾಥ.ಎಸ್.ಹೆಚ್, ವಿಜಯಕುಮಾರ, ಶಾಂತಪ್ಪ ಹಡಪದ, ಮಹಾಂತೇಶ ವಾಡಿ, ನಾಗಪ್ಪ ರಾಯಚೂರಕರ್,ರವಿ ಬೆಳಮಗಿ, ಉಬೆದುಲ್ಲಾ, ನಗರಸಭೆಯ ಅಧಿಕಾರಿ ಸುನೀಲಕುಮಾರ, ಜೆಇ ಬಸವರಾಜ, ಸಾಬಣ್ಣ ಸುಂಗಲಕರ್, ಸಿದ್ದು ಬಾಳಿ, ಫಜಲ್ ಪಟೇಲ ಇತರರು ಇದ್ದರು.

emedia line

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420