ಬಿಸಿ ಬಿಸಿ ಸುದ್ದಿ

ನೀಲೂರು ಗ್ರಾಮದಲ್ಲಿ ಸೇತುವೆ ಆಗಲೀಕರಣಕ್ಕೆ ಬೀದಿಗಿಳಿದ ಗ್ರಾಮಸ್ಥರು

ಕಲಬುರಗಿ: ಅಫಜಲಪೂರ ತಾಲೂಕಿನ ನೀಲೂರ ಗ್ರಾಮದಲ್ಲಿನ ರೈಲ್ವೆ ಟ್ರ್ಯಾಕ್ ಡಬ್ಲಿಂಗ್ ಕಾರ್ಯ ನಡೆಯುತ್ತಿದ್ದು, ಗ್ರಾಮಸ್ಥರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಕೇಳ ಸೇತುವೆಯ ಆಗಲೀಕರಣ ಮಾಡುವಂತೆ ಸಮಸ್ತ ಗ್ರಾಮಸ್ಥರು ಬೀದಿಗಿಳಿದು ಹೋರಾಟ ನಡೆಸರುವ ಘಟನೆ ಇಂದು ನಡೆಯಿತು.

ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟಪ್ರಸಂಗ ನಡೆಯಿತು. ಗ್ರಾಮದಲ್ಲಿ ಕೆಲ ಕಾಲ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಗ್ರಾಮಕ್ಕೆ ಮಾರ್ಗ ಕಲ್ಪಿಸುವ ರೈಲ್ವೆ ಬ್ರಿಡ್ಜ್ ಅತ್ಯಂತ ಚಿಕ್ಕದಾಗಿ ನಿರ್ಮಿಸಿದ್ದು, ಸೇತುವೆಯಲ್ಲಿ ಕೇವಲ ಸಣ್ಣ ವಾಹನಗಳು ಮಾತ್ರ ಸಂಚರಿಸಲು ಸಾಧ್ಯವಿದ್ದು, ಕಾರ್ಹೊರತು ಪಡಿಸಿ, ಆ್ಯಂಬುಲೇನ್ಸ್ಸೇರಿದಂತೆ ಇತರೆ ದೊಡ್ಡ ಗಾತ್ರದ ವಾಹನಗಳು ಸಂಚರಿಲು ಸಾಧ್ಯವಿಲ್ಲ.

ಈ ಹಿನ್ನೆಲಯಲ್ಲಿ ಗ್ರಾಮಸ್ಥರಿಂದ ವಿರೋಧ ವ್ಯಕ್ತಪಡಿಸಿ ಇಂದು ಬೆಳಗ್ಗೆ ಗ್ರಾಮದ ಮುಖಂಡರು, ಯುವಕರು, ಮಹಳೆಯರು, ವೃದ್ದರು, ರೈತರು, ವ್ಯಾಪರಸ್ಥರು ಸೇರಿದಂತೆ ಗ್ರಾಮದ ಪ್ರತಿಯೊಬ್ಬರು ರಸ್ತೆಗೀಳಿದು ಬೃಹತ್ಪ್ರತಿಭಟನೆ ನಡೆಸಿದರು.

ಬ್ರಿಡ್ಜ್ ಅಗಲೀಕರಣ ಮಾಡಿ ಕಾಮಗಾರಿ ಮಾಡುವಂತೆ ಗ್ರಾಮಸ್ಥರ ಒತ್ತಾಯಿಸಿದರು, ಆದರೆ ಬ್ರಿಡ್ಜ್ ಅಗಲೀಕರಣ ಮಾಡದೇ ಕಾಮಗಾರಿ ಮಾಡಲು ರೈಲ್ವೆ ಇಲಾಖೆ ಮುಂದಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಬ್ರಿಡ್ಜ್ ಅಗಲೀಕರಣ ಮಾಡದೆ ಕಾಮಗಾರಿ ನಡೆಸುವಂತಿಲ್ಲ ಎಂದು ಪಟ್ಟು ಹಿಡಿದ್ದ ಗ್ರಾಮಸ್ಥರು, ರೈಲ್ವೆ ಕಾಮಗಾರಿ ನಡಯುವ ಸ್ಥಳಕ್ಕೆ ಹೋಗಿ ಕಾಮಗಾರಿ ತಡೆಯಲು ಯತ್ನಿಸಿದರು.

ವೇಳೆ ಗ್ರಾಮಸ್ಥರನ್ನು ಪೊಲೀಸರು ತಡೆದರು ಎನ್ನಲಾಗಿದ್ದು, ಇದರಿಂದ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ, ವಾಗ್ವಾದ ಸಹ ನಡೆಯಿತು. ಇಡೀ ಗ್ರಾಮದಲ್ಲಿ ಬಿಗುವಿವ ವಾತಾವರಣ ನಿರ್ಮಾಣವಾಗಿತ್ತು.

ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈಗಾಗಲೇ ಬೆಳಗ್ಗೆಯಿಂದಲೇ ಎಲ್ಲ ತರಹದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಕೆಎಸ್ಆರ್ಪಿ ತುಕಡಿಗಳು,ಇದೀಗ ನೀಲೂರ ಗ್ರಾಮದಲ್ಲಿಯೇ ಠಿಕಾಣಿಯನ್ನು ಹೂಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

2 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

2 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

2 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

2 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

3 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

3 hours ago