ಬಿಸಿ ಬಿಸಿ ಸುದ್ದಿ

ಭೋವಿ ಸಮಾಜದ ರುದ್ರಭೂಮಿಯ ಕಪೌಂಡ ಗೋಡೆ ಮಾಡಿಕೊಡಬೇಕೆಂದು ಆಗ್ರಹಿಸಿ ಮನವಿ

ಶಹಾಬಾದ:ನಗರದ ಅಜನಿ ಹಳ್ಳದಲ್ಲಿ ಉಂಟಾದ ಪ್ರವಾಹದಿಂದ ಭೋವಿ ವಡ್ಡರ್ ಸಮಾಜದ ರುದ್ರಭುಮಿಯ ಸುತ್ತು ಗೋಡೆ (ಕಪೌಂಡ ) ಹಾಗೂ ಗೇಟನ್ ಕುಸಿದು ಬಿದ್ದಿದ್ದು, ಅದರ ಪುನರ್ ನಿರ್ಮಾಣ ಮಾಡಿಕೊಡಬೇಕೆಂದು ಆಗ್ರಹಿಸಿ ಭೋವಿ ವಡ್ಡರ್ ಸಮಾಜದ ಉಪಾಧ್ಯಕ್ಷ ಅನೀಲ ಬೋರಗಾಂವಕರ್ ನೇತೃತ್ವದಲ್ಲಿ ಸಮಾಜದ ಮುಖಂಡರು ನಗರಸಭೆಯ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭೋವಿ ವಡ್ಡರ್ ಸಮಾಜದ ಉಪಾಧ್ಯಕ್ಷ ಅನೀಲ ಬೋರಗಾಂವಕರ್ ನಗರದಲ್ಲಿ ಇತ್ತಿಚ್ಚಿಗೆ ಸುರಿದ ಭಾರಿ ಮಳೆಯಿಂದ ಅಜನಿ ಹಳ್ಳದಲ್ಲಿ ಭಾರಿ ಪ್ರಮಾಣದ ಪ್ರವಾಹ ಉಂಟಾಗಿ ಭೋವಿ ಸಮಾಜದ ರುದ್ರಭೂಮಿಯ ಸರಿ ಸುಮಾರು 500ರಿಂದ 600 ಮೀಟರ್ ಸುತ್ತು ಗೋಡೆ ಹಾಗೂ ಕಬ್ಬಿಣದ ಗ್ರೀಲ್ ಗೇಟ್ ಸಂಪೂರ್ಣ ಹಾಳಾಗಿ ಹೋಗಿದೆ.ಅಲ್ಲದೇ 500ಕ್ಕೂ ಹೆಚ್ಚು ಗಿಡಗಳನ್ನು ಹಚ್ಚಲಾಗಿತ್ತು.ಅದರಲ್ಲಿ ಅರ್ಧದಷ್ಟು ಗಿಡಗಳು ಪ್ರವಾಹಕ್ಕೆ ಕಿತ್ತುಕೊಂಡು ಹೋಗಿದೆ. ಆದ್ದರಿಂದ ಕುಸಿದು ಬಿದ್ದಿರುವ ಸುತ್ತು ಗೋಡೆ ಹಾಗೂ ಮುಖ್ಯಧ್ವಾರದ ಗೇಟ್ ನಿರ್ಮಾಣಕ್ಕೆ ನೆರ ಪರಿಹಾರದ ಅನುದಾನದಲ್ಲಿ ಪುನರ್ ನಿರ್ಮಾಣ ಮಾಡಲು ಅನುದಾನ ಬಿಡುಗಡೆಗೊಳಿಸಿ, ಸುತ್ತುಗೋಡೆ, ಗೇಟ್ ನಿರ್ಮಾಣ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಸಮಾಜದ ಮುಖಂಡರಾದ ದೇವದಾಸ ಜಾಧವ, ಶಣಕರ ಕುಸಾಳೆ,ರಾಮು ಕುಸಾಳೆ,ತಿರುಮಲ ದೇವಕರ್,ಸಂಜಯ ವಿಟಕರ್, ದಶರಥ ದೇಸಾಯಿ,ದುರ್ಗಣ್ಣ ಕುಸಾಳೆ, ದೀಪಕ ಚೌಧರಿ,ತಿಮ್ಮಯ್ಯ ಮಾನೆ, ವೆಂಕಟೇಶ ಪವಾರ,ದುರ್ಗಪ್ಪ ಪವಾರ,ರಾಜು ದಂಡಗುಲಕರ್,ಶ್ರೀನಿವಾಸ ನೇದಲಗಿ, ಸಾಬು ದೊತ್ರೆ, ರಾಮು ನಿಡಗುಂದಿ, ಭೀಮರಾವ ಕುಸಾಳೆ,ತಿಮ್ಮಣ್ಣ ದೇವಕರ್, ಕಳೊಳ್ಳಿ ಕುಸಾಳೆ, ಸಂಜಯ ಕುಸಾಳೆ ಸೇರಿದಂತೆ ಅನೇಕ ಜನರು ಇದ್ದರು.

emedia line

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

9 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

10 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

10 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

10 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

11 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

12 hours ago