ಕಲಬುರಗಿ: ವಿಭಾಗ ಕಲಬುರಗಿ (ಜಾ ಮತ್ತು ತ) ಅಬಕಾರಿ ಜಂಟಿ ಆಯುಕ್ತರ ನಿರ್ದೇಶನ ಹಾಗೂ ಕಲಬುರಗಿ ಅಬಕಾರಿ ಉಪ ಆಯುಕ್ತರ ಆದೇಶದ ಮೇರೆಗೆ ಕಲಬುರಗಿ ಉಪವಿಭಾಗ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಜೇವರ್ಗಿ ಅಬಕಾರಿ ವಲಯ ವ್ಯಾಪ್ತಿಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿಕೊಂಡಿರುವ ಸ್ವದೇಶಿ ಮದ್ಯ, ಬಿಯರ್ ಹಾಗೂ ಕಳ್ಳಭಟ್ಟಿ ಸರಾಯಿಯನ್ನು ಜೇವರ್ಗಿ ಹೊರ ವಲಯದ ಸರ್ಕಾರಿ ಜಾಗದಲ್ಲಿ ಮಂಗಳವಾರ ನಾಶಪಡಿಸಲಾಯಿತು.
ಜೇವರ್ಗಿ ಅಬಕಾರಿ ವಲಯದ ವ್ಯಾಪ್ತಿಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿಕೊಂಡು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡ 712.210 ಲೀಟರ್ ಸ್ವದೇಶಿ ಮದ್ಯ, 117.499 ಲೀಟರ್ ಬಿಯರ್, 38 ಲೀಟರ್ ಕಳ್ಳಬಟ್ಟಿ ಸಾರಾಯಿ ಹಾಗೂ 422(15ಎ) ಪ್ರಕರಣಗಳಡಿ 181.440 ಲೀಟರ್ ಮದ್ಯವನ್ನು ಪರಿಸರಕ್ಕೆ ಧಕ್ಕೆಯಾಗದಂತೆ ನಾಶಪಡಿಸಿ, ಖಾಲಿ ಬಾಟಲಿಗಳಿಂದ ಬಂದ ಹಣವನ್ನು ಸರ್ಕಾರಕ್ಕೆ ಚಲನ ಮೂಲಕ ಭರಿಸಲಾಯಿತು. ನಾಶಪಡಿಸಿದ ಪ್ರಕ್ರಿಯೆ ಕುರಿತು ವಿಡಿಯೋಗ್ರಾಫಿ ಮತ್ತು ಫೋಟೋಗಳÀ ದಾಖಲೆ ಮಾಡಿಸಲಾಯಿತು.
ಈ ನಾಶಪಡಿಸುವ ಪ್ರಕ್ರಿಯೆಯಲ್ಲಿ ಕಂದಾಯ ನಿರೀಕ್ಷಕರಾದ ಚಂದ್ರಶೇಖರ್, ಗ್ರಾಮ ಲೆಕ್ಕಾಧಿಕಾರ ರಜನಿಕಾಂತ್, ಕಲಬುರಗಿ ಉಪ ವಿಭಾಗದ ಅಬಕಾರಿ ನಿರೀಕ್ಷಕ ವಿಠ್ಠಲರಾವ ಎಮ್.ವಾಲಿ, ಜೇವರ್ಗಿ ವಲಯದ ಅಬಕಾರಿ ನಿರೀಕ್ಷಕರಾದ ವನಿತಾ. ಎಸ್., ಅಬಕಾರಿ ಉಪ ನಿರೀಕ್ಷಕ ನಿಂಗನಗೌಡ ಪಾಟೀಲ, ಜೇವರ್ಗಿ ತಹಶೀಲ್ದಾರ ಕಚೇರಿ ಸಿಬ್ಬಂದಿ, ಕಲಬುರಗಿ ಕೆ.ಎಸ್.ಬಿ.ಸಿ.ಎಲ್.ಸಿಬ್ಬಂದಿಗಳು ಹಾಗೂ ಜೇವರ್ಗಿ ವಲಯದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…