ಕುರುಬ ಸಮಾಜದ ಜೊತೆಗೆ ಕ್ಷೌರಿಕರನ್ನೂ ಪರಿಶಿಷ್ಟ ಪಂಗಡ (ಎಸ್‌ಟಿ) ಗೆ ಸೇರಿಸಿ: ಎಂ ಬಿ ಶಿವಕುಮಾರ್‌ ಮನವಿ

ಬೆಂಗಳೂರು: ಕುರುಬ ಸಮಾಜವನ್ನು ಪರಿಶಿಷ್ಠ ಪಂಗಡಕ್ಕೆ ಸೇರ್ಪಡೆ ಮಾಡಿ ಎಂದು ಪಕ್ಷಾತೀತವಾಗಿ ಹೋರಾಟ ಮಾಡುತ್ತಿರುವ ಸಚಿವರು ಹಾಗೂ ಮಖಂಡರುಗಳು ಕ್ಷೌರಿಕರನ್ನೂ ಈ ಹೋರಾಟದಲ್ಲಿ ಸೇರಿಸಿಕೊಳ್ಳಿ ಎಂದು ಕ್ಷೌರಿಕ ಮೀಸಲಾತಿ ಒಕ್ಕೂಟದ ರಾಜ್ಯಾಧ್ಯಕ್ಷ ಎಂ ಬಿ ಶಿವಕುಮಾರ್‌ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಅಪಾರ ಬೆಂಬಲವನ್ನು ಹೊಂದಿರುವ ಕುರುಬ ಸಮಾಜವನ್ನು ಪರಿಶಿಷ್ಠ ಪಂಗಡಕ್ಕೆ ಸೇರ್ಪಡೆ ಮಾಢುವಂತೆ ಸಚಿವರಾದ ಈಶ್ವರಪ್ಪ ಮತ್ತು ಕಾಗಿನೆಲೆ ಗುರು ಪೀಠದ ಸ್ವಾಮೀಜಿಗಳ ನೇತೃತ್ವದಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಮಾಜಿ ಮಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕೂಡಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷಾತೀತವಾಗಿ ಈ ರೀತಿ ಹೋರಾಟಕ್ಕೆ ಮುಂದಾಗಿರುವುದು ಸ್ವಾಗತಾರ್ಹ ವಿಷಯವಾಗಿದೆ.

ಇದೇ ವೇಳೆ, ಹಿಂದುಳಿದ ವರ್ಗದಲ್ಲಿ ಅಪಮಾನಕ್ಕೆ, ಜಾತಿನಿಂದನೆಗೆ, ಅಪಹಾಸ್ಯಕ್ಕೆ, ಕ್ಷೌರಿಕ ಸಮಾಜಕ್ಕೆ ಧ್ವನಿ ಇಲ್ಲದೆ, ಜಾತಿಯ ಶಕ್ತಿ ಇಲ್ಲದೆ, ಶಕ್ತಿ ಹೀನವಾದ ನಿರ್ಗತಿಕ ಕ್ಷೌರಿಕ ಸಮಾಜಕ್ಕೆ ಸ್ವಾತಂತ್ರ್ಯ ಬಂದು 73 ವರ್ಷ ಕಳೆದರೂ ಕೂಡಾ ಈಗಲೂ ಹಳ್ಳೀಗಾಡಿನಲ್ಲಿ ದಲಿತರಿಗೆ ಮುಕ್ತವಾಗಿ ಕ್ಷೌರ ಸೇವೆಯನ್ನು ಮಾಡಲಿಕ್ಕೆ ಆಗುತ್ತಿಲ್ಲ ಎಂದರೆ ಸರಕಾರದಿಂದ ಸೌಲಭ್ಯ ತಗೆದುಕೊಳ್ಳೊದಕ್ಕೆ ಆಗುತ್ತೆ? ಈ ದೇಶದಲ್ಲೇ ತಿರಸ್ಕರಿಸಲ್ಪಟ್ಟ ಸಮಾಜ ಎಂದರೆ ಕ್ಷೌರಿಕ ಸಮಾಜ.

ಆದ್ದರಿಂದ ನಮ್ಮ ಈ ಸಮಾಜವನ್ನು ತಮ್ಮ ಹೋರಾಟದ ಜೊತೆಯಲ್ಲಿ ಸೇರಿಸಿಕೊಂಡು ನಮಗೂ ಕೂಡಾ ಎಸ್‌ ಟಿ ಗೆ ಸೇರಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ ಎಸ್‌ ಯಡಿಯೂರಪ್ಪ, ಮಾಜಿ ಮಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾಗಿದ್ದ ಈಶ್ವರಪ್ಪ ಮತ್ತು ಕುರುಬ ಸಮುದಾಯದ ಮಾಜಿ ಮಂತ್ರಿಗಳ ಶಾಸಕರು ಹಾಗೂ ಕುರುಬ ಸಮುದಾಯದ ಎಲ್ಲರಲ್ಲೂ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಜಾತಿಯ ಬೆಂಬಲ ಇಲ್ಲದೆ ರಾಜಕೀಯವಾಗಿ ಹಾಗೂ ಸಮಾಜಿಕವಾಗಿ ಯಾವುದೇ ಮಹತ್ವವನ್ನು ಕ್ಷೌರಿಕ ಸಮಾಜಕ್ಕೆ ನೀಡಲಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಹೂವಿನ ಜೊತೆಯಲ್ಲಿ ನಾರನ್ನೂ ಸ್ವರ್ಗಕ್ಕೆ ಸೇರಿಸಿ ಎನ್ನುವ ಗಾದೆಯಂತೆ ನಿಮ್ಮ ಹೋರಾಟದ ಜೊತೆಯಲ್ಲೇ ನಮ್ಮನ್ನೂ ಸೇರ್ಪಡೆ ಮಾಡಿಕೊಂಡು ಪರಿಶಿಷ್ಠ ಪಂಗಡಕ್ಕೆ ಸೇರ್ಪಡೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

52 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

15 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

15 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420