ಮಹಾಂತಗೌಡ ನಿಧನಕ್ಕೆ ಡಾ. ಅಪ್ಪ ಸಂತಾಪ

0
56

ಕಲಬುರಗಿ: ಬಿಜೆಪಿಯ ಹಿರಿಯ ಮುಖಂಡ ಎಚ್‌ಕೆಆರ್‌ಡಿಬಿ ಮಾಜಿ ಅಧ್ಯಕ್ಷ ಮಹಾಂತಗೌಡ ಪಾಟೀಲ ನಿಧನಕ್ಕೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಹಾಂತಗೌಡ ಪಾಟೀಲರು ಈ ಭಾಗದ ಹಿರಿಯ ಮುಖಂಡರಾಗಿದ್ದು ಜನಸಂಘದ ಕಾಲದಿಂದಲೂ ರಾಜಕೀಯ ಕ್ಷೇತ್ರದಲ್ಲಿದ್ದಾರೆ. ಮಹಾನಗರ ಪಾಲಿಕೆ ಸದಸ್ಯರಾಗಿ. ಬಿಜೆಪಿಯ ಜಿಲ್ಲಾಧ್ಯಕ್ಷರಾಗಿ ತಮ್ಮ ಕೊಡಿಗೆಯನ್ನು ನೀಡಿದ್ದಾರೆ ಅವರ ನಿಧನದಿಂದ ಈ ಭಾಗಕ್ಕೆ ಅಪಾರವಾದ ನಷ್ಟವಾಗಿದೆ ಎಂದು ತಮ್ಮ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿವಿಯ ಕುಲಪತಿ ಡಾ. ನಿರಂಜನ ನಿಷ್ಟಿ, ಕುಲಸಚಿವ ಡಾ. ಅನಿಲಕುಮಾರ ಬಿಡವೆ ಕೂಡ ಸಂತಾಪ ಸೂಚಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here