ಕಲಬುರಗಿ: ಮುಂಗಾರು ಬೆಳೆ ಕೈಗೆಟುಕದ ಕಾರಣ ಮಾಡಿದ ಸಾಲ ತೀರಿಸಲಾಗದೆ ಖಿನ್ನತೆಗೆ ಒಳಗಾದ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಲಾಡ್ಲಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಕೊಂಚೂರು ಗ್ರಾಮದ ಭೀಮಾಶಂಕರ ಮಲ್ಲಪ್ಪ ನರಸಗೊಂಡ (೬೦) ಆತ್ಮಹತ್ಯೆಗೆ ಶರಣಾದ ರೈತ. ಮೃತ ರೈತನಿಗೆ ಪತ್ನಿ ಹಾಗೂ ನಾಲ್ವರು ಪುತ್ರರಿದ್ದಾರೆ. ಬೆಳೆಗೆ ಸಿಂಪರಣೆ ಮಾಡಲು ಮನೆಯಲ್ಲಿ ತಂದಿಡಲಾಗಿದ್ದ ಕೀಟನಾಶಕ ತೈಲವನ್ನು ಕುಡಿದು ದನದ ಕೊಟ್ಟಿಗೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಒಕ್ಕಲುತನಕ್ಕಾಗಿ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಾರ್ವಜನಿಕವಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದ ಎನ್ನಲಾಗಿದ್ದು, ಕಳೆದ ವರ್ಷ ಮತ್ತು ಈ ವರ್ಷ ಅತಿಯಾದ ಮಳೆಯಾದ್ದರಿಂದ ಬೆಳೆನಾಶವಾಗಿದ್ದರಿಂದ ಮನನೊಂದು ವಿಷ ಸೇವಿಸಿದ್ದಾನೆ. ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ರೈತ ಮೃತಪಟ್ಟಿದ್ದಾನೆ.
ಈ ಕುರಿತು ಮೃತ ರೈತನ ಪತ್ನಿ ಶರಣಮ್ಮ ನೀಡಿದ ದೂರಿನ ಮೇರೆಗೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ವಿಜಯಕುಮಾರ ಭಾವಗಿ ಸ್ಥಳಕ್ಕೆ ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…