ಮಹಾತ್ಮ ಗಾಂಧೀಜಿಯವರ, ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮದಿನ ಆಚರಣೆ

ಕೋಲಾರ: ಜಿಲ್ಲೆ ಮತ್ತು ತಾಲೂಕಿನ ನರಸಾಪುರ ಗ್ರಾಮದಲ್ಲಿ ಇರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಹಾತ್ಮ ಗಾಂಧೀಜಿಯವರ 151ನೇ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ರವರ 116ನೇ ಜನ್ಮದಿನವನ್ನು ಸರಳವಾಗಿ ಆಚರಿಸಲಾಯಿತು,

ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕರಾದ ಸೊಣ್ಣೆಗೌಡ ರವರು ಮತ್ತು ಪ್ರಾಂಶುಪಾಲರಾದ ಸುಬ್ರಮಣ್ಯಂ ರವರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕರಾದ ಸೊಣ್ಣೆಗೌಡ ರವರು ಮಾತನಾಡಿ ಆಧುನಿಕ ಜಗತ್ತಿನ ನವೀನ ಜೀವನ ಶೈಲಿಯ ಇಂದಿನ ಜನ ತಮ್ಮೆಲ್ಲ ಜಂಜಾಟಗಳಿಗೆ ಪರಿಹಾರ ಹುಡುಕುವಲ್ಲಿ ನೆನೆಯ ಬೇಕಾದ ಪ್ರಾತಃಸ್ಮರಣೀಯರು ಯಾರು ಎಂಬ ಪ್ರಶ್ನೆಗೆ ನಿಸ್ಸಂದೇಹವಾದ ಉತ್ತರ ” ರಾಷ್ಟ್ರಪಿತ ಮಹಾತ್ಮ ಗಾಂಧಿ ” ಶರವೇಗದಲ್ಲಿ ಮುನ್ನುಗ್ಗುತ್ತಿರುವ ತನ್ನೊಳಗೆ ತುಂಬಿಕೊಳ್ಳುತ್ತಿರುವ ದುರಾಸೆ,  ಅಸತ್ಯ,  ಭ್ರಷ್ಟಾಚಾರ,  ಮೋಸ,  ವಂಚನೆ,  ಮೊದಲಾದವುಗಳ ಸುಳಿಯಲ್ಲಿ ಸಿಲುಕಿ ಜಗತ್ತಿನಾದ್ಯಂತ ಎಲ್ಲೆಲ್ಲೂ ಅಶಾಂತಿ ತೋರುತ್ತಿದೆ,  ಜನತೆ ಸ್ವೆಚ್ಟ್ರಚಾರವೆಂಬ ಮಾಯಜಿಂಕೆಯನ್ನು ಬೆನ್ನು ಹತ್ತಿದ್ದಾರೆ ಇಂತಹ ನೂರಾರು ಸಮಸ್ಯೆಗಳಿಗೆ ಇಂದಿಗೂ ಕಾಣುವ ಪರಿಹಾರ ” ಗಾಂಧಿ ಮಾರ್ಗ ” ಆದ್ದರಿಂದಲೇ ಇಂದು ತತ್ವಗಳು ಕೇವಲ ಭಾರತದ ಜನರಿಗಷ್ಟೆ ಅಲ್ಲ ಜಗತ್ತಿನಾದ್ಯಂತ ಕೋಟ್ಯಾಂತರ ಜನರ ಬದುಕಿನ ಆಶಾಕಿರಣವಾಗಿ ಕಾಣುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಸುಬ್ರಮಣ್ಯಂ, ಮುಖ್ಯ ಶಿಕ್ಷಕರಾದ ಸೊಣ್ಣೆಗೌಡ, ಶಾಲೆಯ ಶಿಕ್ಷಕರಾದ ಭಾರತಿ, ಹಂಸವೇಣಿ, ಸುಜಾತ, ಸುವರ್ಣ ಕುಮಾರಿ,  ಸೌಮ್ಯ, ಸುಧಾ, ಶಿವರತ್ನಮ್ಮ, ಶಿವಪ್ರಸಾದ್, ರವಿ ಕುಮಾರ್, ಶಿವ ಶಂಕರ್ ರೆಡ್ಡಿ, ನಾರಾಯಣಸ್ವಾಮಿ, ನಂದೀಶ್, ಗೋಪಿನಾಥ್,  ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

2 hours ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

3 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

3 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

3 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

3 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420