ಕಲಬುರಗಿಯಲ್ಲಿ ಪತಿ, ಪತ್ನಿ ಜೊಡಿ ಕೊಲೆ: ಆರೋಪಿಗಳು ಪರಾರಿ

0
271

ಕಲಬುರಗಿ: ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ತಡ ರಾತ್ರಿ ಪತಿ ಮತ್ತು ಪತ್ನಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ದಿನಕಿ ತಾಂಡದಲ್ಲಿ ನಡೆದಿದೆ.

ಮಾರುತಿ ದೇವಲ ಜಾಧವ್ (44) ಮತ್ತು ಇವರ ಪತ್ನಿ ಶಾರದಾ ಮಾರುತಿ ಜಾಧವ್ (35) ಅವರನ್ನು ನಿನ್ನೆ ರಾತ್ರಿ ವೇಳೆಯಲ್ಲಿ ಆರೋಪಿಗಳು ಮನೆಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮಾರುತಿ ದೇವಲ ಜಾಧವ್ ಅವರು ಕೃಷಿ ಕೆಲಸ ಮಾಡುತ್ತಿದರು ಎಂದು ತಿಳಿದುಬಂದಿದೆ. ಈ ಘಟನೆಯಿಂದ ತಾಂಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Contact Your\'s Advertisement; 9902492681

ಸ್ಥಳಕ್ಕೆ ಡಿ.ಎಸ್.ಪಿ ಕಮಲಾಪುರ ಪೊಲೀಸ್ ಠಾಣೆಯ ಸಿಪಿಐ ಶಂಕರ್ ಗೌಡ ಪಾಟೀಲ್, ಪಿ.ಎಸ್.ಐ ಭೀಮರಾಯ ಪಾಟೀಲ್, ಗ್ರಾಮೀಣ ವಿಭಾದ ಪಿಜಿ ದೊಡ್ಡಮನಿ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಕೊಲೆ ಮಾಡಿ ತಲೆ ಮರಿಸಿಕೊಂಡ ಆರೋಪಿಗಳ ಬಂಧನಕ್ಕೆ ಪೊಲೀಸ್ ಜಾಲ ಬೀಸಿ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here