ಕರ್ನಾಟಕ ವಿಕಲಚೇತನರ ಹಕ್ಕುಗಳ ಒಕ್ಕೂಟದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಸಂಗನಗೌಡ

0
65

ಸುರಪುರ: ಕರ್ನಾಟಕ ವಿಕಲಚೇತನರ ಹಕ್ಕುಗಳ ಒಕ್ಕೂಟದ ಕಲ್ಯಾಣ ಕರ್ನಾಟಕ ವಿಭಾಗದ ಅಧ್ಯಕ್ಷರನ್ನಾಗಿ ಹೋರಾಟಗಾರ ಸಂಗನಗೌಡ ಧನರಡ್ಡಿಯನ್ನು ನೇಮಕಗೊಳಿಸಲಾಗಿದೆ ಎಂದು ಒಕ್ಕೂಟದ ರಾಜ್ಯಧ್ಯಕ್ಷ ಗುರುನಾಥರಡ್ಡಿ ಕೆ ಚಿಂತಾಕಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಅನೇಕ ವರ್ಷಗಳಿಂದ ವಿಕಲಚೇತನರ ಏಳಿಗೆಗಾಗಿ ಹೋರಾಟ ಮಾಡುತ್ತಿರುವ ಸಂಗನಗೌಡ ಧನರಡ್ಡಿಯವರನ್ನು ಗುರುತಿಸಿ ಕಲ್ಯಾಣ ಕರ್ನಾಟಕ ಭಾಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು ವಿಕಲಚೇತನರ ಸಮಸ್ಯೆಗಳ ನಿವಾರಣೆಗೆ ಹೋರಾಟ ರೂಪಿಸಿಕೊಂಡು ಹೋಗುವಂತೆ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here