ಯಾದಗಿರಿ: ಶಹಾಪುರ ತಾಲ್ಲೂಕಿನ ವನದುರ್ಗಾ ಗ್ರಾಮ ಪಂಚಾಯತ್ ವ್ಯಪ್ತಿಯಲ್ಲಿ ಶೆಟ್ಟಿಕೇರಾ ಸೀಮಾಂತರದ ತೊಗರಿ ಹೊಲದ ನಡುವೆ ಗಾಂಜಾ ಬೆಳೆ ಬೆಳಿದಿರುವ ಬಗ್ಗೆ ಗೋಗಿ ಪೊಲೀಸ್ ಠಾಣೆಯ ಪೊಲೀಸ್ ರು ಖಚಿತ ಮಾಹಿತಿ ಆಧರಿಸಿ ಧಾಳಿ ನಡೆಸಿ 20 ಕೆ.ಜಿ 25 ಗ್ರಾಮ ಹಸಿ ಗಾಂಜಾ ಬೆಳೆ ವಶಪಡಿಸಿಕೊಂಡಿದ್ದಾರೆ.
ಇಳಗೇರ ಈರಣ್ಣಗೌಡ ರಾಮಚಂದ್ರಯ್ಯ ಕಲಾಲ (55) ಗಾಂಜಾ ಬೆಳೆ ಬೆಳೆದ ವ್ಯಕ್ತಿ ಪೊಲೀಸ್ ಧಾಳಿ ವೇಳೆ ಪರಾರಿಯಾದ ಆರೋಪಿ ಎಂದು ತಿಳಿದುಬಂದಿದ್ದು, ತನ್ನ ತೊಗರಿ ಹೊಲದಲ್ಲಿ ಸುಮಾರು 57 ಹಸಿ ಗಾಂಜಾ ಬೆಳೆ ಬೇಳೆದಿರುವುದು ಪೊಲೀಸರ ಧಾಳಿಯಿಂದ ಬೆಳಕಿಗೆ ಬಂದಿದೆ.
ಸುರಪೂರ ಡಿ.ಎಸ್.ಪಿ ಮತ್ತು ಶಹಾಪೂರ ಸಿಪಿಐ ರವರ ಮಾರ್ಗದರ್ಶನದಲ್ಲಿ ಠಾಣೆಯ ಆರಕ್ಷಕ ಉಪನಿರೀಕ್ಷರಾದ ಸೋಮಲಿಂಗ್ ಒಡೆಯರ್ ಅವರ ನೇತೃತ್ವದ ಎ.ಎಸ್.ಐ ಸಿದ್ದಣ್ಣ, ಶಂಕ್ರೆಪ್ಪ, ಮಲ್ಲಪ್ಪ, ಹಯ್ಯಾಳಪ್ಪ, ಹನುಮಂತ್ರಾಯ, ಶ್ರೀನಿವಾಸ, ಹಣಮಂತ್ರಾಯ, ನಿಂಗಪ್ಪ ಕಡ್ಲಿ, ಶರಣಗೌಡ ಸಿಬ್ಬಂದಿಗಳ ತಂಡದಿಂದ ಕಾರ್ಯಚರಣೆ ನಡೆಸಿ ಒಟ್ಟು ಅಂದಾಜು 6.5 ಲಕ್ಷದ ಮೌಲ್ಯದ ಗಾಂಜಾ ಬೆಳೆ ಜಪ್ತಿ ಮಾಡಿಕೊಂಡಿದ್ದಾರೆ.
ಈ ಕುರಿತು ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…