ಕೋಲಾರ: ಜಿಲ್ಲೆ ಮತ್ತು ತಾಲೂಕಿನ ನರಸಾಪುರ ಗ್ರಾಮದಲ್ಲಿ ಇರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 2000-2003ನೇ ಸಾಲಿನ ವಿದ್ಯಾರ್ಥಿಗಳ ವತಿಯಿಂದ ಇಂದು ಗುರುವಂದನಾ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಕಾಲೇಜಿನ ಆವರಣದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಅದ್ದೂರಿಯಾಗಿ ನಡೆಸಲಾಯಿತು. ಮತ್ತು 2000-2003ನೇ ಸಾಲಿನ ವಿದ್ಯಾರ್ಥಿಗಳಿಂದ ಮುಖ್ಯೋಪಾಧ್ಯಾಯರಿಗೆ ಹಾಗೂ ಶಿಕ್ಷಕ ವೃಂದದವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಗುರುಗಳನ್ನು ಗೌರವಿಸುವ ಗುರುವಂದನಾ ಕಾರ್ಯಕ್ರಮ ಒಂದು ಸತ್ಸಂಪ್ರದಾಯ. ಗುರು-ಶಿಷ್ಯರ ಬಾಂಧವ್ಯ ಸ್ಥಿರವಾಗಿ ಮುಂದುವರೆಯಬೇಕು ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಶ್ರೀನಿವಾಸ್ ರವರು ತಿಳಿಸಿದರು. ಕೋಲಾರ ತಾಲೂಕಿನ ನರಸಾಪುರ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಭಾನುವಾರ 2000-2003ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ ಹಮ್ಮಿಕೊಳ್ಳಲಾಗಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗುರು ಪರಂಪರೆಯನ್ನು ಗೌರವಿಸುವ ಗುರುವಂದನೆ ಎಂಬ ವಿನೂತನ ಕಾರ್ಯಕ್ರಮವು ಭಾರತೀಯ ಮೌಲ್ಯ ಪ್ರತಿಪಾದಕವಾಗಿದೆ. ಪರಿಸರ ಕಾಳಜಿ. ಹಿರಿಯರ ಆದರ್ಶ. ರಾಷ್ಟ್ರಪ್ರೇಮ. ಪರಂಪರೆಯ ಅರಿವು. ಸಾಮಾಜಿಕ ಬದ್ಧತೆ. ಶಿಸ್ತು. ಸಾಮಾಜಿಕ ಕಳಕಳಿ. ಸಾರ್ವಜನಿಕ ಆಸ್ತಿಯ ಬಗ್ಗೆ ಗೌರವ ಮುಂತಾದ ಅಂಶಗಳನ್ನು ಮೈ ಗೊಡಿಸಿಕೊಂಡಲ್ಲಿ ಯಾವುದೇ ಉದ್ಯೋಗ. ವ್ಯಾಪಾರ ವಹಿವಾಟನ್ನು ನಡೆಸಿದರೂ ಮಾದರಿಯಾಗುತ್ತೀರಿ ಎಂದು ತಿಳಿಸಿದರು.
ಕುಸುಮ ರವರು ಮಾತನಾಡಿ ಶಿಷ್ಯರು ಉತ್ತಮ ನಾಗರಿಕರಾಗುವುದೇ ಗುರುವಿಗೆ ನೀಡುವ ಉನ್ನತ ಕಾಣಿಕೆ ಎಂದು ಹೇಳಿದರು. ಗುರುವಂದನೆ ಸಲ್ಲಿಸುವ ಜತೆಗೆ ಸ್ನೇಹಿತರು ಸಮಗಮಗೊಂಡಿರುವ ಕಾರ್ಯಕ್ರಮ ಅವಿಸ್ಮರಣೀಯ ಎಂದರು. ಕುಮಾರ್ ರವರು ಮಾತನಾಡಿ ಹಿಂದಿನ ಶಿಕ್ಷಣ ಹಾಗೂ ಇಂದಿನ ಶಿಕ್ಷಣದ ವ್ಯವಸ್ಥೆಗಳು ಬದಲಾದಂತೆ ವಿದ್ಯಾರ್ಥಿಗಳು ಹಾಗೂ ಗುರುಗಳ ಮಧ್ಯೆ ಕೂಡ ಅಂತರವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಈ ಗುರುವಂದನಾ ಕಾರ್ಯಕ್ರಮವನ್ನು ನಡೆಸಿರುವುದು ಮುಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು. ಇಂದಿನ ಕಾರ್ಯಕ್ರಮ ಎಲ್ಲಾ ಉಪನ್ಯಾಸಕರಿಗೆ ಗೌರವ ತಂದಿದೆ. ನಮ್ಮ ವಿದ್ಯಾರ್ಥಿಗಳು ಎಂದು ಹೆಮ್ಮೆಯಿಂದ ಹೇಳಿಕೊಳ್ಳುವುದಾಗಿ ತಿಳಿಸಿದರು.
ಭಾರತ ಸಂಸ್ಕೃತಿಯಲ್ಲಿ ಗುರು ಶಿಷ್ಯ ಪರಂಪರೆ ಮಹತ್ವವನ್ನು ಪಡೆದುಕೊಂಡಿದೆ. ಗುರುಗಳಿಗೆ ಗೌರವ. ಪೂಜ್ಯ ಭಾವನೆ ಇತ್ತು. ಜತೆಗೆ ಗುರುವನ್ನು ದೇವರ ಸಮಾನ ಎಂದು ಪೂಜಿಸಿದ್ದ ಸಂಸ್ಕೃತಿ ನಮ್ಮದಾಗಿದೆ. ಇಂತಹ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ವಿದ್ಯಾರ್ಥಿಗಳ ಕಾರ್ಯ ಮಹತ್ವವಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಶ್ರೀನಿವಾಸ್. ಬಿ.ಎನ್.ಎಸ್. ಕುಸುಮ(ಆರ್ ಎನ್). ಮೆರೀನಾ. ಮಂಜುಳಾ. ಕುಮಾರ್( ಕೆ.ಕೆ). ವಿದ್ಯಾರ್ಥಿಗಳಾದ ಎಂ.ಮುರಳಿ. ಜಯಂತ್. ರಮೇಶ್. ಸಿ.ಎಂ ನಾಗೇಶ್. ಮುನಿರಾಜ್. ಮಂಜುಳಾ. ಸುಮಿತ್ರ. ಶ್ವೇತಾ. ಅಶ್ವಿನಿ. ಪುಷ್ಪ. ನಾಗರತ್ನ. ಹಸೀನಾ. ಸರಸ್ವತಿ. ಪ್ರಮೀಳಾ. ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…