ಸುರಪುರ: ತಮ್ಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳ ದೃಢಿಕರಣದ ನಕಲು ಪ್ರತಿಗಳನ್ನು ನೀಡುವಂತೆ ಅರ್ಜಿ ಸಲ್ಲಿಸಿದರೆ ನಕಲಿ ದಾಖಲೆಗಳನ್ನು ನೀಡುವ ಮೂಲಕ ಕರ್ತವ್ಯಲೋಪ ಎಸಗಿರುವ ತಹಸೀಲ್ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅಮರಣ್ಣ ಸಜ್ಜನ್ ಕುಟುಂಬಸ್ಥರು ಸುರಪುರ ತಹಸೀಲ್ ಕಚೇರಿ ಮುಂದೆ ಅಹೋರಾತ್ರಿ ಉಪವಾಸ ಧರಣಿ ಆರಂಭಿಸಿದ್ದಾರೆ.
ನಗರದ ಹಸನಾಪುರ ಪ್ರದೇಶದ ತಮ್ಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ದೃಢಿಕರಣಗೊಳಿಸಿ ನೀಡುವಂತೆ ಅನೇಕ ವರ್ಷಗಳಿಂದ ಅರ್ಜಿ ಸಲ್ಲಿಸುತ್ತಿದ್ದರು ೧೯೯೬ರಲ್ಲಿ ಅಂದಿನ ಗ್ರಾಮಲೆಕ್ಕಾಧಿಕಾರಿ ಕೊಟ್ಟಿ ದಾಖಲೆ ನೀಡಿ ಅಧಿಕಾರಿಗಳ ನಕಲಿ ಸಹಿ ಮಾಡಿ ನಮ್ಮ ಆಸ್ತಿಯ ದಾಖಲೆ ಬೇರೆಯವರ ಹೆಸರಲ್ಲಿ ಇದೆ ಎಂದು ನೀಡಿ ವಂಚನೆ ಮಾಡಿದ್ದಾರೆ.
ಆ ಅಧಿಕಾರಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ನಾವು ಕೇಳಿರುವ ಎಲ್ಲಾ ದಾಖಲಾತಿಗಳನ್ನು ದೃಢಿಕರಣಗೊಳಿಸಿ ನೀಡಬೇಕು,ಇದನ್ನು ಕೇಳಿದರೆ ತಹಸೀಲ್ ಕಚೇರಿಯ ಸಿಬ್ಬಂದಿ ನಮ್ಮ ದಾಖಲಾತಿಗಳು ಲಭ್ಯವಿಲ್ಲ ಎಂದು ಅಂಚೆಯ ಮೂಲಕ ನಮ್ಮ ಮನೆಗೆ ಪತ್ರ ಕಳುಹಿಸಿದ್ದು ನಮ್ಮ ದಾಖಲೆಗಳ ಕುರಿತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡುವ ಸಿಬ್ಬಂದಿಗಳು ನಮಗೆ ಮಾತ್ರ ಲಭ್ಯವಿಲ್ಲ ಎಂದು ಹೇಳಿ ನಮ್ಮನ್ನು ಯಾಮಾರಿಸುವ ಕೆಲಸ ಮಾಡುತ್ತಿದ್ದಾರೆ.
ಆದ್ದರಿಂದ ನಮಗೆ ನ್ಯಾಯ ಸಿಗುವವರೆಗೆ ಉಪವಾಸ ಧರಣಿ ನಡೆಸುವುದಾಗಿ ತಿಳಿಸಿದ್ದಾರೆ.ಧರಣಿಯಲ್ಲಿ ಅಮರಣ್ಣ ಸಜ್ಜನವರ ಕುಟುಂಬಸ್ಥರಾದ ಶಿವಕುಮಾರ ಶರತ್ ಸಜ್ಜನ್ ಅವರು ಉಪವಾಸ ಧರಣಿಯಲ್ಲಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…