ಶಹಾಬಾದ:ತಳವಾರ ಹಾಗೂ ಪರಿವಾರ ಜನಾಂಗದವರಿಗೆ ಎಸ್ಟಿ ಪ್ರಮಾಣ ಪತ್ರ ನೀಡಬೇಕೆಂದು ಆಗ್ರಹಿಸಿ ನಗರ ಹಾಗೂ ಗ್ರಾಮೀಣ ಕೋಲಿ ಸಮಾಜದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ನಗರದ ಬಸವೇಶ್ವರ ವೃತ್ತದಿಂದ ನೆಹರು ವೃತ್ತದವರೆಗೆ ಪ್ರತಿಭಟನೆ ನಡೆಸಿ ನಂತರ ಉಪತಹಸೀಲ್ದಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನಾಕಾರರು ಮಾತನಾಡಿ, ತಳವಾರ ಹಾಗೂ ಪರಿವಾರ ಸಮುದಾಯದವರು ಆಥರ್ಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವುಗಳಾಗಿದ್ದು, ಈ ಎಲ್ಲ ಮಾನದಂಡಗಳ ಮೇಲೆ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ ಮಾಡಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದ್ದರು.ಅದರಂತೆ ರಾಜ್ಯದಲ್ಲಿ ಸಕರ್ಾರವು ಕೆಲವು ದಿನಗಳವರೆಗೆ ಎಸ್ಟಿ ಪ್ರಮಾಣ ಪತ್ರ ನೀಡಿದ್ದಾರೆ.ನಂತರ ರಾಜ್ಯದಲ್ಲಿ ಅಧಿಕಾರಿಗಳು ಪ್ರಮಾಣ ಪತ್ರ ನೀಡಲು ತಡೆ ಹಿಡಿದಿದ್ದಾರೆ.ಇದರಿಂದ ತಳವಾರ ಹಾಗೂ ಪರಿವಾರ ಸಮಾಜದವರಿಗೆ ಅನ್ಯಾಯವಾಗಿದೆ. ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅವರು ತಳವಾರ ಹಾಗೂ ಪರಿವಾರ ಸಮುದಾಯದವರಿಗೆ ಎಸ್ಟಿ ಪ್ರಮಾಣ ನೀಡಲು ಅಧಿಕಾರಿಗಳಿಗೆ ಸೂಚಿಸಬೇಕು.ಇಲ್ಲದಿದ್ದರೇ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬಿಜಾಪೂರ ಕೋಲಿ ಸಮಾಜ ಮುಖಂಡರು ಶಿವಾಜಿ ಮೇಟಗಾರ, ತೊನಸನಹಳ್ಳಿಯ ಕೊತ್ತಲಪ್ಪ ಮುತ್ಯಾ, ಯಾನಾಗುಂದಿಯ ಶ್ರೀಗಳು, ನಗರ ಹಾಗೂ ಗ್ರಾಮೀಣ ಕೋಲಿ ಸಮಾಜದ ಅಧ್ಯಕ್ಷ ಶಿವಕುಮಾರ ತಳವಾರ, ಶರಣು ಹಲಕರ್ಟಿ, ತಳವಾರ ಮತ್ತು ಪರಿವಾರ ಎಸ್ಟಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಸರದಾರ ರಾಯಪ್ಪ, ಹೊನಗುಂಟಾ ಕೋಲಿ ಸಮಾಜದ ಅಧ್ಯಕ್ಷ ದೇವೆಂದ್ರ ಕಾರೊಳ್ಳಿ, ಮಲ್ಕಣ್ಣ ಮುದ್ದಾ,ಬಸವರಾಜ ಮದ್ರಿಕಿ, ಅಶೋಕ ಮ್ಯಾಗೇರಿ, ಆನಂದ ಕೊಡಸಾ, ಕಾಶಣ್ಣ ಚನ್ನೂರ್,ಲೋಹಿತ ಮಳಖೇಡಕರ್, ಶಿವು ಬುರ್ಲಿ,ವಿಶ್ವರಾಜ ಫಿರೋಜಬಾದ,ಶಿವಕುಮಾರ ಕಾರೊಳ್ಳಿ ಮಾತನಾಡಿದರು.ರಾಜು ಸಣಮೋ, ನಾಗರಾಜ ಯಡ್ರಾಮಿ, ಶಿವಕುಮಾರ ನಾಟೇಕಾರ,ಬೆಳ್ಳಪ್ಪ ಖಣದಾಳ, ಮೌನೇಶ ಕೊಡ್ಲಿ, ಲಕ್ಷ್ಮಿಕಾಂತ ಮಸಭೋ,ಸುನೀತಾ ತಳವಾರ, ರಾಯಪ್ಪ ಹುರಮುಂಜಿ ಮರಲಿಂಗ ಗಂಗಭೋ, ರಾಜೇಶ ಯನಗುಂಟಿಕರ್ ಸೇರಿದಂತೆ ಅನೇಕ ಜನರು ಹಾಜರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…