ಜೇವರ್ಗಿ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಕಣ್ಮರೆಯಾಗಿ ಗೂಂಡಾ ರಾಜ್ಯವಾಗಿದೆಯಾ ? ಎನ್ನುವುದು ಅನುಮಾನ ಮೂಡಿಸುತ್ತಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲ ! ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸು ರಾವಣ ರಾಜ್ಯವಾಗಿ ಕಂಗೊಳಿಸುತ್ತಿದೆ. ದಮನಿತರ ಹಕ್ಕುಗಳನ್ನು ಕಸಿಯಲಾಗುತ್ತಿದೆ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ ಎಂದು ಬಹುಜನ ಸಮಾಜ ಪಕ್ಷ ಪ್ರತಿಭಟನೆ ನಡೆಸಿ ಆರೋಪಿಸಿದೆ.
ಇತ್ತೀಚಿಗೆ ಉತ್ತರಪ್ರದೇಶದಲ್ಲಿ 19 ವರ್ಷದ ಯುವತಿಯನ್ನು ಅಮಾನವೀಯವಾಗಿ ಅತ್ಯಾಚಾರ ಕೊಲೆ ಖಂಡಿಸಿ ಆರೋಪಿಗಳಿ ಕಠಿಣ ಶಿಕ್ಷೆಗೆ ಒತ್ತಾಯಿ ಬಹುಜನ ಸಮಾಜ ಪಕ್ಷದ ತಾಲೂಕ ಅಧ್ಯಕ್ಷರಾದ ಯಮನೇಶನ್ ಅಂಕಲಗಿ ಇವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು.
ಈ ವೇಳೆಯಲ್ಲಿ ಪಕ್ಷದ ಕಾರ್ಯಕರ್ತರು, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸರ್ಕಾರದ ಕುಮ್ಮಕ್ಕು : ಪ್ರತಿಭಟನೆ ಉದ್ದೇಶಿಸಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಮುಖಂಡರಾದ ಪ್ರಭಾಕರ್ ಸಾಗರ್ ಮಾತನಾಡುತ್ತಾ ಶೋಷಿತರು ಹಾಗೂ ಬಹು ಜನರಿಗೆ ರಕ್ಷಣೆ ಇಲ್ಲದಂತಾಗಿದೆ, ಚುಕ್ಕಾಣಿ ಹಿಡಿದಿರುವ ಸರಕಾರಗಳು ತಮ್ಮ ಸ್ವಾರ್ಥ ಸಾಧಿಸಲು ಸಾಮಾನ್ಯ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿವೆ ಎಂದು ಕಿಡಿಕಾರಿದರು. ಬಿಜೆಪಿ ಸರಕಾರದ ನೀತಿಗಳಿಂದ ಮೇಲ್ವರ್ಗದ ಜನರು ಹಾಗೂ ಶ್ರೀಮಂತರು ತಮ್ಮ ಅಟ್ಟಹಾಸವನ್ನು ಕ್ರೌರ್ಯವನ್ನು ಮೆರೆಯುತ್ತಿದ್ದಾರೆ. ಇದಕ್ಕೆ ಸರ್ಕಾರ ಪರೋಕ್ಷ ರೀತಿಯಲ್ಲಿ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು.
ಬಹುಜನ ಸಮಾಜ ಪಕ್ಷದ ತಾಲ್ಲೂಕು ಅಧ್ಯಕ್ಷ ಯಮನೇಶ ಅಂಕಲಗಿ, ಜಿಲ್ಲಾ ಮುಖಂಡರಾದ ಪ್ರಭಾಕರ್ ಸಾಗರ,ಮಲ್ಲು ನೇದಲಗಿ ,ಪರಮಾನಂದ ಯಲಗೋಡ , ಭೀಮು ನೆಲೋಗಿ, ಮಲ್ಲು ಬಳ್ಳುಂಡಗಿ, ಅಬ್ದುಲ್ ಗನಿ, ಪ್ರದೀಪ್ ಬುಟನಾಳ, ವಿಶ್ವ ಆಲೂರ್ ಅಭಿಜಿತ್ ಮಯೂರ್, ಶಿವು ಹುಲ್ಲೂರು ಸರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…