ಬಿಸಿ ಬಿಸಿ ಸುದ್ದಿ

ಗ್ರಾಮ ಅಭಿವೃದ್ಧಿಗೆ ಅಧಿಕಾರಿಗಳ ನಿರ್ಲಕ್ಷ್ಯ ಕ.ರ.ವೇ ಅಧ್ಯಕ್ಷರ ಆರೋಪ

ಆಳಂದ: ತಾಲೂಕಿನ ನಿಂಬರ್ಗಾ ಗ್ರಾಮ ಪಂಚಾಯತನ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಗ್ರಾಮ ಪಂಚಾಯತ ಹಲವಾರು ವರ್ಷಗಳಿಂದ ಇದ್ದರು ಸಹಿತ ಇದುವರೆಗೆ ಒಂದೇ ಒಂದು ಈ ಬಡಾವಣೆಯಲ್ಲಿ ಸಿಸಿ ರಸ್ತೆಗಲಿಲ್ಲ,ಚರಂಡಿ ನೀರು ಎಲ್ಲಿ ಬೇಕೆಂದರಲ್ಲಿ ನಿಂತು ಅನೇಕ ಸಾಂಕ್ರಾಮಿಕ ರೋಗಗಳಿಗೆ ಸಾರ್ವಜನಿಕರು ತುತ್ತಾಗುತ್ತಿದ್ದಾರೆ ಎಂದು ಕ.ರ.ವೇ ಅಧ್ಯಕ್ಷರಾದ ಬಸವರಾಜ ಯಳಸಂಗಿ ತಿಳಿಸಿದ್ದಾರೆ.

ಅನೇಕ ಚಿಕ್ಕ ಮಕ್ಕಳು ಹಾಗೂ ವಯೋವೃದ್ದರು ಜಾರಿ ಬಿದ್ದು ಗಾಯಗಳಾದ ಘಟನೆಗಳಂತೂ ಇಲ್ಲಿ ಸಹಜವಾಗಿ ಹೋಗಿದೆ. ರೈತಾಪಿ ವರ್ಗದ ಧನ-ಕರುಗಳು ಚರಂಡಿ ನಿರಲ್ಲೇ ನಿಂತು ಅನೇಕ ರೋಗಕ್ಕೆ ತುತ್ತಾಗುತ್ತಿವೆ.ಗಿಡ-ಕಂಟಿಗಳಂತೂ ರಸ್ತೆಗೆ ಹಾದುಕೊಂಡಿವೆ. ಮಹಿಳೆಯರಿಗೆ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ.ಕಂಭಗಳಿಗೆ ಬಲ್ಪ ಗಲಿಲ್ಲ.ದೇಶದ ಪ್ರತಿ ಗ್ರಾಮಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕೋಟ್ಯಾಂತರ ರೂಪಾಯಿ ವ್ಯಯ ಮಾಡುತ್ತಿವೆ,ಆದರೆ ಗ್ರಾಮೀಣ ಪ್ರದೇಶಗಳು ಮಾತ್ರ ಅಭಿವೃದ್ಧಿಯಿಂದ ವಂಚಿತವಾಗಿವೆ ಎಂದರು

ಇದಕೆಲ್ಲಾ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಮನವಿ ಮಾಡಳು ಗ್ರಾಮ ಪಂಚಾಯತಗೆ ಹೋದರೆ ಅಭಿವೃದ್ಧಿ ಅಧಿಕಾರಿ ಕೈಗೆ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಒಂದು ತಿಂಗಳ ಹಿಂದೆ ಕರ್ನಾಟಕ ರಕ್ಷಣಾ ವೇದಿಕೆ ಈ ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ ಮುಂದೆ ಪ್ರತಿಭಟನೆ ನಡೆಸಿತ್ತು, ಅಲ್ಲದೆ ಸಂಬಂಧಪಟ್ಟ ತಾಲೂಕಿನ ಅಧಿಕಾರಿಗಲಿಗೂ ಈ ವಿಷಯದ ಬಗ್ಗೆ ತಿಳಿಸಿತು, ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ ಅಧಿಕಾರಿಗಳು ಕೇವಲ ಒಂದು ರಸ್ತೆಗೆ ಮುರುಮ್(ಖಟುಕ)ಹೊಡೆಸಿದ್ದಾರೆ. ಇನ್ನುಳಿದ ಯಾವುದೇ ಸಮಸ್ಯೆಗಳಿಗೆ ಮುತುವರ್ಜಿ ವಹಿಸದೇ ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದು,ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆ ಹರಿಸದೇ ಹೋದಲ್ಲಿ ಸಾರ್ವಜನಿಕರೊಂದಿಗೆ ಗ್ರಾಮ ಪಂಚಾಯತಗೆ ಭೀಗ ಜಡಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಸವರಾಜ ಯಳಸಂಗಿ ಎಚ್ಚರಿಕೆ ನೀಡಿದ್ದಾರೆ

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago