ಹತ್ರಾಸನಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ದಸಂಸ ಪ್ರತಿಭಟನೆ

ಶಹಾಬಾದ: ಉತ್ತರ ಪ್ರದೇಶದ ಹತ್ರಾಸನಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಮಂಗಳವಾರ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರಸಭೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಸಂಸ ರಾಜ್ಯ ಸದಸ್ಯ ಡಾ.ಮಲ್ಲೇಶಿ ಸಜ್ಜನ್,ಉತ್ತರ ಪ್ರದೇಶದ ಹತ್ರಾಸನಲ್ಲಿ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾದ ಆರೋಪಿಗಳನ್ನು ಪ್ರಕರಣದಿಂದ ತಪ್ಪಿಸಲು ರಾತ್ರೋ ರಾತ್ರಿ ಮೃತ ದೇಹವನ್ನು ಕುಟುಂಬದವರಿಗೂ ನೀಡದೇ ಹೀನಾಯವಾಗಿ ಸುಟ್ಟುಹಾಕುವ ಮೂಲಕ ಧಾರ್ಮಿಕ ಸಂಪ್ರದಾಯಗಳನ್ನು ಬೂದಿ ಮಾಡಿದ ಅಲ್ಲಿನ ಸರಕಾರದ ಕ್ರಮ ಖಂಡನೀಯ.ಇದು ದೇಶದ ಎಲ್ಲರ ಆತ್ಮಸಾಕ್ಷಿಯನ್ನು ಕಲಕಿದೆ.ಪದೇ ಪದೇ ಇಂತಹ ಪ್ರಕರಣಗಳು ನಡೆಯುತ್ತಿದ್ದರೂ ಅಲ್ಲಿನ ಸರಕಾರ ಕಣ್ಣು ಮುಚ್ಚಿ ಕುಳಿತಿದೆ. ದೇಶದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರಕಾರ ರಾಮರಾಜ್ಯದಲ್ಲಿ ರಾವಣನ ಆಡಳಿತ ನಡೆಸುತ್ತಿದೆ.ಹೆಣ್ಣು ಮಕ್ಕಳಿಗೆ ದೇಶದಲ್ಲಿ ರಕ್ಷಣೆ ಇಲ್ಲ.ಈ ಸರಕಾರವನ್ನು ಮೊದಲು ಕಿತ್ತೊಗೆಯಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೇ ಯೋಗಿ ಆದಿತ್ಯನಾಥ ಸರಕಾರ ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಈ ಸರಕಾರವನ್ನು ಕೂಡಲೇ ವಜಾಗೊಳಿಸಿ, ರಾಷ್ಟ್ರಪತಿಗಳು ತಮ್ಮ ಸುಪರ್ಧಿಗೆ ಪಡೆದುಕೊಳ್ಳಬೇಕು. ಆರೋಪಿಗಳನ್ನು ಕೂಡಲೇ ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಸಂಚಾಲಕ ಸುರೇಶ ಮೆಂಗನ ಮಾತನಾಡಿ,ನಮ್ಮ ದೇಶದಲ್ಲಿ ಮಹಿಳೆಯರ ಶೋಚನೀಯ ಮತ್ತು ವಾಸ್ತವ ಪರಿಸ್ಥಿತಿಯನ್ನು ಇಂತಹ ಘಟನೆಗಳು ತೋರಿಸುತ್ತವೆ ಎಂದು ಟೀಕಿಸಿದರು. ಹಲವಾರು ದೊಡ್ಡ ಭಾಷಣಗಳ ಮೂಲಕ ಬೇಟಿ ಬಚಾವೂ, ಬೇಟಿ ಪಡಾವೋ ಎಂದು ಹೇಳುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮತ್ತು ಅದೇ ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರಕಾರ ಮಹಿಳೆಯರ ಹಾಗೂ ಮಕ್ಕಳ ಘನತೆಯನ್ನು ಕಾಪಾಡುವಲ್ಲಿ ಸೋತು ಹೋಗಿವೆ ಎಂದು ಆರೋಪಿಸಿದರು.ಭಾರತೀಯ ಸಂಸ್ಕೃತಿಯ ಬಗ್ಗೆ ಮಹಿಳೆಯರ ಬಗ್ಗೆ ಹೇಳುವ ಸರಕಾರ ಈ ದೇಶದ ಮಹಿಳೆಯರನ್ನು ರಕ್ಷಿಸುವುದರ ಕುರಿತು ಯಾವುದೇ ಕಾಳಜಿಯನ್ನು ಹೊಂದಿಲ್ಲದಿರುವುದು ನಾಚಿಕೆಗೇಡಿನ ಸಂಗತಿ ಎಂದರು.ಜನರ ರಕ್ಷಣೆ ಮಾಡಬೇಕಾದ ಪೊಲೀಸರೇ ಅಲ್ಲಿ ಅಪರಾಧಿಗಳೋಂದಿಗೆ ನಿಂತಿರುವುದು ಅತ್ಯಂತ ನೋವು ತರಿಸುವಂತದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ಮಯೂರ ಮತ್ತು ಭರತ್ ಧನ್ನಾ, ತಾಲೂಕಾ ಸಂಚಾಲಕ ಸುನೀಲ ಮೆಂಗನ್,ತಾಲೂಕಾ ಸಂಘಟನಾ ಸಂಚಾಲಕರಾದ ಶರಣಪ್ಪ ದೊಡ್ಡಮನಿ,ನಿಂಗಪ್ಪ ಕನಕನಹಳ್ಳಿ,ರಮೇಶ ಹುಗ್ಗಿ, ಭೀಮಾಶಂಕರ ಕಾಂಬಳೆ, ಶಾಮ ನಂದೂರಕರ್, ರಾಜು ನಾಟೇಕಾರ, ಮಹೇಶಕುಮಾರ ಕಾಂಬಳೆ, ಶ್ರೀಧರ ಕೊಲ್ಲೂರ್, ರಾಜು ನಾಟೇಕಾರ, ಖಜಾಂಚಿ ಚಂದ್ರಕಾಂತ ಉದಯಕರ್, ಲೋಹಿತ್ ಕಟ್ಟಿ, ರಾಮಣ್ಣ ಇಬ್ರಾಹಿಂಪೂರ, ನಾಗಪ್ಪ ರಾಯಚೂರಕರ್,ಜಗನ್ನಾಥ.ಎಸ್.ಹೆಚ್, ರಾಜೇಶ ಯನಗುಂಟಿಕರ್,ಪ್ರವೀಣ ರಾಜನ್ ಸೇರಿದಂತೆ ಕುರುಬ ಸಮಾಜದ ತಾಲೂಕಾಧ್ಯಕ್ಷ ಮಲ್ಕಣ್ಣ ಮುದ್ದಾ, ಕಸಾಪದ ಅಧ್ಯಕ್ಷ ಶರಣಗೌಡ ಪಾಟೀಲ, ಮಲ್ಲಿಕಾರ್ಜುನ ಪಟ್ಟಣಕರ್, ಸೇರಿದಂತೆ ಅನೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದರು.

emedia line

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

9 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

12 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

17 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

22 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

27 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420