ಜೇವರ್ಗಿ: ಉತ್ತರಪ್ರದೇಶದಲ್ಲಿ 19 ವರ್ಷದ ವಾಲ್ಮೀಕಿ ಸಮಾಯುವತಿಯಾದ ದಲಿತ ಯುವತಿಯಾದ ಕಾಮುಕ ಯುವಕರು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಮಾನವೀಯತೆಯ ಕಗ್ಗೊಲೆಯಾಗಿದೆ ಎಂದು ಖಂಡಿಸುತ್ತಾ ದಲಿತ ಸಂಘರ್ಷ ಸಮಿತಿ ಉತ್ತರ ಪ್ರದೇಶದ ಸರಕಾರ ವಜಾಗೊಳಿಸಬೇಕು ಎಂದು ಆಗ್ರಹಿಸಿ ಜೇವರ್ಗಿ ತಹಸೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರಸಲ್ಲಿಸಿದೆ.
ದಲಿತ ಸಂಘರ್ಷ ಸಮಿತಿ ಹಾಗೂ ಮಾದಿಗ ಸಂಘರ್ಷ ಸಮಿತಿಯ ಜಂಟಿಯಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಆದಿತ್ಯನಾಥ ಆಡಳಿತವು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಂಡು ಮಹಿಳೆಯರ ಮೇಲೆ ಶೋಷಣೆ ನಡೆಸುತ್ತಿರುವುದು, ಪ್ರಧಾನಿಗಳು ಹಾಗೂ ಆಡಳಿತ ವ್ಯವಸ್ಥೆ ಕಂಡು ಕಾಣದಂತೆ ಜಾಣ ಕುರುಡತನ ಯಾವ ಪುರುಷಾರ್ಥಕ್ಕಾಗಿ ? ಎಂದು ಪ್ರಶ್ನಿಸಿದರು.
ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಮಾಡಿರುವ ಕಾಮುಕರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ಕುಟುಂಬಗಳಿಗೆ ಸರಕಾರ ಸೂಕ್ತ ಪರಿಹಾರ ನೀಡಿ ಪೊಲೀಸ್ ಭದ್ರತೆಯನ್ನು ಒದಗಿಸಬೇಕು .ಎಂದು ದಲಿತ ಸಂಘರ್ಷ ಸಮಿತಿ ಹಾಗೂ ಮಾದಿಗ ಸಂಘರ್ಷ ಸಮಿತಿ ತಾಲೂಕ ಶಾಖೆಯ ಜಂಟಿ ಪ್ರತಿಭಟನೆಯಲ್ಲಿ ರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು .
ಪ್ರತಿಭಟನೆ ಹೋರಾಟದ ನೇತೃತ್ವವನ್ನು ದಲಿತ ಸಂಘರ್ಷ ಸಮಿತಿಯ ತಾಲೂಕ ಸಂಚಾಲಕರಾದ ಸಿದ್ದರಾಮ ಕಟ್ಟಿ, ಸಂಘಟನಾ ಸಂಚಾಲಕರಾದ ಶಿವಕುಮಾರ ಹೆಗಡೆ, ಎಂ ಎಸ್ ಎಸ್ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಿಲ್ಲರ್, ಗೌರವ ಅಧ್ಯಕ್ಷ ಮಲ್ಲಪ್ಪ ನರಿಬೋಳ ,ಬಸವರಾಜ ಕಟ್ಟಿ, ಮರಪ್ಪ ಹೂತಿನ ಮಡು, ಶರಣಪ್ಪ ಆಂದೋಲ ,ಎಂ,ಎಸ್ ಎಸ್ ತಾಲೂಕ ಅಧ್ಯಕ್ಷರು , ಅಶೋಕ್ ನೆಲೋಗಿ ಶ್ರೀನಾಥ್ ಕಟ್ಟಿ ,ದೇವರಾಜ ಬಣಮಿ, ಹಿರಗಪ್ಪ ಹೊನ್ನಾಳ. ಮರಿಯಪ್ಪ ಜೇರಟಗಿ, ಸೂರ್ಯಕಾಂತ್ ಬಿರಾಳ, ಅಬ್ದುಲ್ ಘನಿ ಜೇವರ್ಗಿ, ಇತರ ಮುಖಂಡರು ಹಾಗೂ ನೂರಾರು ಜನ ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…