ಕಲಬುರಗಿ: ಕೋವಿಡ್ -19 ನಿಯಂತ್ರಣಕ್ಕಾಗಿ ಸರಕಾರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವದನ್ನು ಸ್ವಾಗತಿಸುತ್ತೇವೆ. ಆದರೇ ಇದೇ ಹೆಸರಲ್ಲಿ ಮಾಸ್ಕ್ ಧರಿಸದವರಿಗೆ , 1000 ಹಾಗೂ ಗ್ರಾಮೀಣ ಭಾಗದವರಿಗೆ 500 ದಂಡ ವಸೂಲಿ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಹೀಗಾಗಿ ಈ ಕ್ರಮವನ್ನು ಸರಕಾರ ಕೈ ಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣ ದ ಕಲಬುರಗಿ ತಾಲೂಕು ಅಧ್ಯಕ್ಷರಾದ ವಿಜಯಕುಮಾರ್ ಅಂಕಲಗಿ ರವರು ಸರಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ರಾಜ್ಯ ಸರಕಾರವು ಜಾರಿಗೆ ತಂದಿರುವ ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಮಾಡಿರುವ ಕ್ರಮ ಒಳ್ಳೆಯದು. ಆದರೆ ಗ್ರಾಮೀಣ ಭಾಗದ ಜನತೆಗೆ ಇದು ತುಂಬಾ ತೊಂದರೆಯಾಗಿದೆ. ದೈನಂದಿನ ಚಟುವಟಿಕೆಗಳಿಗೆ ಹಳ್ಳಿಯಿಂದ ತಾಲೂಕು ಕೇಂದ್ರಕ್ಕೆ ಕೂಲಿ ಕೆಲಸಕ್ಕೆ ಬರುವುದು ಸಹಜ. ಕೂಲಿ ಮಾಡಿ ಮರಳಿ ಊರಿಗೆ ಹೋಗುವಾಗ ಪೋಲಿಸ್ ಇಲಾಖೆಯವರು ಮಾಸ್ಕ ಹಾಕದವರಿಗೆ 500 ರೂ.ದಂಡ ಕಟ್ಟಲೇಬೇಕು ಎಂದು ಒತ್ತಯಿಸುತ್ತಾರೆ.

ಅದರ ಆದೇಶ ತಮ್ಮ ವಾಹನಗಳನ್ನು ಅಲ್ಲಿಯೇ ಬಿಟ್ಟು ಗ್ರಾಮೀಣ ಪ್ರದೇಶದಿಂದ ಕಾಲ್ನಡಿಗೆಯಿಂದ ಹೋಗುತ್ತಿರುವ ಉದಾಹರಣೆ ಬಹಳವಾಗಿವೆ. ಒಂದು ದಿನ ಗ್ರಾಮೀಣ ಭಾಗದಲ್ಲಿ ದುಡಿದರೆ ಅವರಿಗೆ 400 ರೂ ಸಂಬಳ ಸಿಗುವ ಸಮಯದಲ್ಲಿ ಸರಕಾರದ ಆದೇಶದ ಪ್ರಕಾರ 500 ರೂ ಎಲ್ಲಿಂದ ಕಟ್ಟಬೇಕು ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಹಾಗಾಗಿ ಈ ಕೂಡಲೇ ಈ ದಂಡ ವಸೂಲಿ ಕ್ರಮ ಕೈ ಬಿಟ್ಟು ಬೇರೆ ಸಂಘ ಸಂಸ್ಥೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಕೊರೊನಾ ಹರಡುವಿಕೆ ತಡೆಗೆ ಮುಂದಾಗಬೇಕು ಎಂದು ಅವರು ಸರಕಾರಕ್ಕೆ ಮನವಿ ಮಾಡಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420