ಕಲಬುರಗಿ: ಬಿಜೆಪಿ ನಾಯಕರ ಬಗ್ಗೆ ಸಿದ್ದರಾಮಯ್ಯ ಏಕವಚನ ಪ್ರಯೋಗ ಸರಿಯಲ್ಲ, ಅವರ ಮಾತು ನಾಲಿಗೆಯ ಸಂಸ್ಕೃತಿ ಏನು ಅಂತಾ ತೋರಿಸುತ್ತದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
ಇಂದು ಬೆಂಗಳೂರಿನಿಂದ ಕೆ.ಕೆ. ಎಕ್ಸ್ಪ್ರೆಸ್ ರೈಲು ಮೂಲಕ ನಗರಕ್ಕೆ ಆಗಮಿಸಿದ ಸಚಿವ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು ಎಂದು, ಬೈ ಎಲೆಕ್ಷನ್ನಲ್ಲಿ ಸೋಲುವ ಭೀತಿಯಿಂದ ಡಿಕೆಶಿ ನಿವಾಸದ ಮೇಲೆ ಬಿಜೆಪಿ ಸಿಬಿಐ ಅಸ್ತ್ರ ಪ್ರಯೋಗಿಸಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಯಡಿಯೂರಪ್ಪ ಮನೆ ಮೇಲೂ ಸಿಬಿಐ ದಾಳಿ ನಡೆದಿತ್ತು. ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರದಲ್ಲಿ ಯಡಿಯೂರಪ್ಪ ತನಿಖೆ ಎದುರಿಸಿ ನಿರಪರಾಧಿಯಾಗಿ ಹೊರ ಬಂದರು. ಅದರಂತೆ ಡಿಕೆಶಿ ನಿರಪರಾಧಿ ಎಂದು ಸಾಬೀತು ಪಡಿಸಲಿ ಎಂದು ಟಾಂಗ್ ಕೊಟ್ಟರು.
ಸಿಎಂ ಯೋಗಿ ಆದಿತ್ಯನಾಥ್, ತೇಜಸ್ವಿ ಸೂರ್ಯ ಬಗ್ಗೆ ಸಿದ್ದರಾಮಯ್ಯ ಆಡಿರುವ ಮಾತು ಗೊತ್ತಿದೆ. ಸಿದ್ಧರಾಮಯ್ಯ ವರ್ತನೆಯಿಂದ ಕಾಂಗ್ರೆಸ್ ನೆಲಕಚ್ಚಿದೆ ಎಂದು ಆರೋಪಿಸಿದ ಸಚಿವ, ಹೀಗೇ ವರ್ತನೆ ಮುಂದುವರಿದರೆ ಕಾಂಗ್ರೆಸ್ ನೆಲದಿಂದ ಕೆಳಗೆ ಹೋಗುತ್ತೆ ಎಂದು ಕಟ್ಟುವಾಗಿ ಟೀಕಿಸಿದರು.
ಈ ವೇಳೆಯಲ್ಲಿ ಶಿಕ್ಷಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ, ಕೆ,ಕೆ.ಆರ್.ಡಿಬಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಸಿ ಪಾಟೀಲ್ ರೇವೂರ್, ಈಶಾನ್ಯ ಸಾರಿಗೆ ಇಲಾಖೆಯ ಅಧ್ಯಕ್ಷ ಶಾಸಕ ವಿಜಯ ಕುಮಾರ ತೆಲ್ಕೂರ್, ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…