ತಳವಾರ, ಪರಿವಾರ ಸಮಾಜಕ್ಕೆ ನ್ಯಾಯಬದ್ಧವಾಗಿ ಎಸ್.ಟಿ ಸಿಗಬೇಕು: ಕೆ.ಎಸ್ ಈಶ್ವರಪ್ಪ

ಕಲಬುರಗಿ: ತಳವಾರ, ಪರಿವಾರ ಸಮಾಜಕ್ಕೆ ನ್ಯಾಯಬದ್ಧವಾಗಿ ಎಸ್.ಟಿ ಸಿಗಬೇಕು, ಅದು ಕೊಡಿಸುವ ತನಕ ನಾನಂತೂ ನಿಮ್ಮ ಕೈಬಿಡುವುದಿಲ್ಲ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್ ಈಶ್ವರಪ್ಪ ಹೇಳಿದರು.

ತಳವಾರ, ಪರಿವಾರ ಎಸ್.ಟಿ ಹೋರಾಟ ಸಮಿತಿ ವತಿಯಿಂದ ಕಲಬುರಗಿ ಜಿಲ್ಲಾಧಿಕಾರಿಗಳ ಕಛೇರಿ ಎದರು ಹಮ್ಮಿಕೊಂಡಿರುವ 41ನೇ ದಿನದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಾಗೂ 25ನೇದಿನದ ಅಹೋರಾತ್ರಿ ಸರತಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಅವರು ನಾನು ಹಿಂದುಳಿದವರಿಗೆ ನ್ಯಾಯ ಕೊಡಿಸಲು ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ.

ಕೇಂದ್ರ ಸರ್ಕಾರ ನಿಮಗೆ ಕೊಟ್ಟಿರುವಂತಹ ಸೌಲಭ್ಯವನ್ನು ಯಾವುದೋ ತಾಂತ್ರಿಕ ಕಾರಣದಿಂದ ತಡೆಹಿಡಿಯಲಾಗಿದೆ ಹೊರತು ರದ್ದುಗೊಳಿಸಿಲ್ಲ. ನನಗೆ ಇದರ ಬಗ್ಗೆ ತಕ್ಕಮಟ್ಟಿಗೆ ಮಾಹಿತಿ ಇದೆ, ಸಂಪೂರ್ಣ ಮಾಹಿತಿ ಇಲ್ಲ. ನೀವು ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಕೊಟ್ಟರೆ ಮೊದಲು ಅಧಿಕಾರಿಗಳೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟು ನಿಮ್ಮ ಸಮಸ್ಯೆ ಬಗೆಹರಿಸಿ ನಿಮಗೆ ನ್ಯಾಯಯುವಾಗಿ ಸಿಗಬೇಕಾದ ಎಸ್.ಟಿ ಪ್ರಮಾಣಪತ್ರವನ್ನು ಕೊಡಿಸುತ್ತೇನೆ.

ನಾನು ಸುಳ್ಳು ಆಶ್ವಾಸನೆ ಕೊಡುವವನಲ್ಲ. ಈ ಜೀವ ಹೋಗುವ ಕಿಂತ ಮುಂಚೆ ನಿಮಗೆ ನ್ಯಾಯಯುವಾಗಿ ಸಿಗಬೇಕಾಗಿದ್ದ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರವನ್ನು ಕೊಡಿಸುತ್ತೇನೆ.

ಆದಷ್ಟು ಬೇಗ ನಿಮಗೆ ನ್ಯಾಯ ದೋರಕಿಸಿ ಕೋಡುವ ಪ್ರಯತ್ನ ಮಾಡುತ್ತೇನೆ. ನಾವು ಯಾವತ್ತೂ ಹಿಂದೂಳಿದ ಸಮಾಜದವರ ಪರವಾಗಿದ್ದೇವೆ. ಅದಕ್ಕೆ ಬದ್ದವಾಗಿ ನಿಮ್ಮ ಜೋತೆ ಬೆಂಬಲವಾಗಿ ಕೊನೆವರೆಗೆ ನಿಲ್ಲುತ್ತೇವೆ ಎಂದು
ಎಂದು ಹೇಳಿದರು.

ಈ ಸಂದರ್ಭದಲ್ಲಿ ಪೂಜ್ಯ ಶರಣ ಶ್ರೀ ಕೊತ್ಲಪ್ಪ ಮುತ್ಯಾ, ಪಶುಸಂಗೋಪನಾ ಹಾಗೂ ಬೀದರ ಮತ್ತು ಯಾದಗಿರಿ ಉಸ್ತುವಾರಿ ಸಚಿವರಾದ ಪ್ರಬು ಚವ್ಹಾಣ,
ವಿಧಾನಪರಿಷತ್ ಸದಸ್ಯರಾದ ಬಿ.ಜಿ ಪಾಟೀಲ, ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಬಸವರಾಜ ಮತ್ತಿಮೂಡ,
ಶಿವರಾಜ ಪಾಟೀಲ ರದ್ದೇವಾಡಗಿ, ದೊಡಪ್ಪಗೌಡ ಪಾಟೀಲ ನರಿಬೋಳ, ಶಶೀಲ ಜಿ. ನಮೋಶಿ, ಧಮ೯ಣ್ಣ ದೋಡ್ಡಮನಿ. ಬಸವರಾಜ ಮದ್ದರಕಿ, ಶರಣಪ್ಪ ತಳವಾರ, ಅವ್ವಣ್ಣ ಮ್ಯಾಕೇರಿ, ಡಾ. ಸರ್ದಾರ ರಾಯಪ್ಪ, ರಾಜೇಂದ್ರ ರಾಜವಾಳ, ಸುನಿತಾ ಎಂ ತಳವಾರ, ಚಂದ್ರಶೇಖರ ಜಮಾದಾರ, ರೇವಣಸಿದ್ದಪ್ಪ ಗೌಡ ಕಮಾನಮನಿ, ಸಿದ್ದು ಬೂಸಾ, ಸಿದ್ದು ಸರಡಗಿ, ಶರಣು ಕೋಲಿ, ರವಿ ಸಣಮನಿ ಶಾಬಾದ, ಬೆಳ್ಯಪ್ಪ ತೊನಸನಹಳ್ಳಿ, ರಾಜಶೇಖರ ಹಂಚಿನಾಳ, ಶರಣು ಬಿದನೂರ ಸೇರಿದಂತೆ ಸಮಾಜದ ಮುಖಂಡ ರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

2 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

5 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

10 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

12 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420