ಶಹಾಬಾದ:ನಗರಸಭೆಯ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಜನವಿರೋಧಿಯಾಗಿದ್ದು, ಕೂಡಲೇ ನಗರಸಭೆಯ ಪೌರಾಯುಕ್ತರು ಈ ಬಗ್ಗೆ ಪರಿಶೀಲನೆ ನಡೆಸಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಮನವಿ ಮಾಡಿಕೊಂಡಿದ್ದಾರೆ.
ಕೆಕೆಆರಡಿಬಿ ಅನುದಾನದಲ್ಲಿ ನಿರ್ಮಾಣ ಮಾಡಲಾದ ನಗರಸಭೆಯ 32 ವಾಣಿಜ್ಯ ಮಳಿಗೆಗಳನ್ನು ಅಕ್ಟೋಬರ್ 5ರಂದು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಬಹಿರಂಗ ಹರಾಜು ಮಾಡಲಾಗಿದೆ.ಹರಾಜು ಸಂದರ್ಭದಲ್ಲಿ ಅನ್ಯ ಸ್ಥಳೀಯ ಸಂಸ್ಥೆಗಳಲ್ಲಿ ಅನುಸರಿಸಲಾಗಿರುವ ಮಾನದಂಡಗಳನ್ನು ಇಲ್ಲಿ ಪಾಲಿಸಿಲ್ಲ.ಅಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದರೆ ಲಾಟರಿ ಮೂಲಕ ಆಯ್ಕೆ ಮಾಡಲಾಗಿದೆ.ಆದರೆ ಶಹಾಬಾದ ನಗರಸಭೆಯಲ್ಲಿ ತಿಂಗಳ ಬಾಡಿಗೆ ರೂ. 6675 ರಿಂದ 21500 ರೂ ಹರಾಜಾದರೆ, ಇನ್ನೂ ಕೆಲವು ಮಳಿಗೆಗಳು 3550 ರೂ.ಯಿಂದ 35000 ರೂ. ಹಾರಾಜಿನ ಮೂಲಕ ಬಾಡಿಗೆಗೆ ಮಳಿಗೆ ಪಡೆದಿದ್ದಾರೆ. ಈಗಾಗಲೇ ನಗರದ ಎರಡು ಕಾಖರ್ಾನೆಗಳು ಬಂದ್ ಆಗಿವೆ. ಗಣಿಗಳು, ಪಾಲಿಷ್ ಉದ್ಯಮ ಬಂದ್ ಕುಂಟುತ್ತ ಸಾಗಿವೆ.ಇಲ್ಲಿನ ಆರ್ಥಿಕ ಸ್ಥಿತಿ ಸಂಪೂರ್ಣ ಕುಸಿದು ಹೋಗಿದೆ.ಉದ್ದಿಮೆದಾರರು ವ್ಯಾಪಾರವಿಲ್ಲದೇ ಸಂಕಷ್ಟ ಎದುರಿಸುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ತಿಂಗಳ ಬಾಡಿಗೆ 20 ಸಾವಿರದಿಂದ 35 ಸಾವಿರದವರೆಗೆ ಬಾಡಿಗೆ ಹೇಗೆ ಕಟ್ಟಲು ಸಾಧ್ಯ. ಇದರಿಂದ ಬಾಡಿಗೆ ಕಟ್ಟಲು ಸಾಧ್ಯವಾಗದೇ ಮುಚ್ಚುವಂತ ಪರಿಸ್ಥಿತಿ ಬಂದೊದಗುತ್ತದೆ. ನಗರಸಭೆಯವರು ಖಾಲಿ ಮಾಡಲು ಹೋದರೆ ನ್ಯಾಯಾಲಯದ ಮೇಟ್ಟಿಲೇರಿ ನಗರಸಭೆಯ ಆದಾಯಕ್ಕೆ ಪೆಟ್ಟು ಬೀಳುತ್ತದೆ.ಅಲ್ಲದೇ ನಗರಾಭಿವೃದ್ಧಿ ಇಲಾಖೆಯ ಸುತ್ತೊಲೆಯ ವಿರುದ್ಧವಾಗಿ ನಡೆದಿರುವ ಹರಾಜು ಜನವಿರೋಧಿಯಾಗಿದೆ.ಅಲ್ಲದೇ ನಗರಸಭೆಯ ವಾಣಿಜ್ಯ ಮಳಿಗೆಗಳ ಬಾಡಿಗೆ 35000ರೂ.ಯಾದರೆ ಇತರ ಖಾಸಗಿ ಅಂಗಡಿಗಳ ಬಾಡಿಗೆಯನ್ನು ಹೆಚ್ಚಳ ಮಾಡಲು ಮುಂದಾಗಿರುವುದರಿಂದ ಆತಂಕದಲ್ಲಿ ವ್ಯಾಪಾರಸ್ಥರಿದ್ದಾರೆ.ಆದ್ದರಿಂದ ಆರ್ಥಿಕ ಮುಗ್ಗಟ್ಟಿನಲ್ಲಿರುವ ನಗರದಲ್ಲಿ ಜನರ ಹಿತದ ಅನುಗುಣವಾಗಿ ಮತ್ತೊಮ್ಮೆ ಪರಿಶೀಲಿಸಬೇಕೆಂದು ಡಾ.ರಶೀದ್ ಮರ್ಚಂಟ್ ನಗರಸಭೆಯ ಪೌರಾಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…