ಗ್ರಾಮ ಪಂಚಾಯತಿಗಳಲ್ಲಿ ಪ್ರಮಾಣ ಪತ್ರಗಳ ನೀಡಲು ಗಾಂಧಿವಾದಿ ಆಗ್ರಹ

ಸುರಪುರ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಜಾತಿ ಪ್ರಮಾಣ ಪತ್ರ, ಪಹಣಿ ಮತ್ತು ಆಧಾರ ಕಾರ್ಡು ವಿತರಣೆಗೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಗಾಂಧಿವಾದಿ ಜನಪರ ಚಳುವಳಿ ಸಮಿತಿಯ ಅಧ್ಯಕ್ಷ ಹೈಯಾಳಪ್ಪ ಸಾಧು ಆಗ್ರಹಿಸಿದ್ದಾರೆ.

ಗ್ರಾಮೀಣ ಪ್ರದೇಶದ ಜನರು ಕೃಷಿ ಕೂಲಿ ಕಾರ್ಮಿಕರು ಮತ್ತು ರೈತರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಜಾತಿ ಪ್ರಮಾಣ ಪತ್ರ ಆಧಾರ ಕಾರ್ಡು ಮತ್ತು ಪಹಣಿ ದಾಖಲೆಗಳನ್ನು ಪಡೆದುಕೊಳ್ಳಲು ತಹಶೀಲ್ದಾರ ಕಚೇರಿಗೆ ಅಲೆಯುತ್ತಿದ್ದು, ತಹಶೀಲ್ದಾರ ಕಚೇರಿಯಲ್ಲಿ ಈ ದಾಖಲೆಗಳನ್ನು ಪಡೆಯಲು ಇಡೀ ದಿನಾ ಕಾಯುವಂತಹ ಪರಿಸ್ಥಿತಿ ಇದೆ ನೆಟ್ ಹೋಗಿದೆ ನಾಳೆ ಬನ್ನಿ ಹೀಗೆ ಹತ್ತು ಹಲವು ನೆಪಗಳನ್ನು ಹೇಳುತ್ತಾ ಕಚೇರಿಗೆ ಬರುವ ಜನರನ್ನು ಕಚೇರಿಯ ಸಿಬ್ಬಂದಿಗಳು ಅಲೆದಾಡಿಸುತ್ತಿದ್ದು ಕಚೇರಿಯಲ್ಲಿ ಬ್ರೋಕರ್‌ಗಳು ತುಂಬಿ ಹೋಗಿದ್ದು ದಾಖಲೆಗಳನ್ನು ಪಡೆಯಲು ಬರುವ ಜನರ ಜೊತೆ ಅಸಭ್ಯವಾಗಿ ವರ್ತಿಸುವದಲ್ಲದೆ ಕೆಲವೊಮ್ಮೆ ಬೆದರಿಕೆ ಹಾಕುತ್ತಾರೆ.

ಅನೇಕ ಸಲ ಬಡವರಿಗೆ ಗೂಂಡಾಗಳಿಂದ ಹೊಡೆಸಿದ್ದಾರೆ ಅವರು ದೂರಿದ್ದಾರೆ, ಈ ಬಗ್ಗೆ ತಹಶೀಲ್ದಾರ ಗಮನಕ್ಕೆ ತರಲು ಹೋದಾಗ ಅವರು ಕೂಡಾ ಸಾರ್ವಜನಿಕರ ಸಮಸ್ಯೆಗಳನ್ನು ಶಾಂತಚಿತ್ತದಿಂದ ಆಲಿಸದೇ ಬೈಯ್ದು ಕಳುಹಿಸುತ್ತಾರೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಪರಿಸ್ಥಿತಿ ಹದಗೆಟ್ಟು ಹೋಗಿದ್ದು ಬಡವರ ಕೂಗು ಯಾರಿಗೂ ಕೇಳಿಸುತ್ತಿಲ್ಲ ಕೂಡಲೇ ಈ ಪರಿಸ್ಥಿತಿಯನ್ನು ಹೋಗಲಾಡಿಸಲು ಹಾಗೂ ತಹಶೀಲ್ದಾರ ಕಚೇರಿಗೆ ಅಲೆದಾಡುವದನ್ನು ತಪ್ಪಿಸಲು ಗ್ರಾಮೀಣ ಪ್ರದೇಶದ ಜನರ ಹಿತದೃಷ್ಟಿಯಿಂದ ಆಯಾ ಗ್ರಾಮ ಪಂಚಾಯತಿಗಳಲ್ಲಿ ಜಾತಿ ಪ್ರಮಾಣ ಪತ್ರ, ಪಹಣಿ ಮತ್ತು ಆಧಾರ ಕಾರ್ಡು ದಾಖಲೆಗಳನ್ನು ವಿತರಿಸಲು ವ್ಯವಸ್ಥೆ ಕೈಗೊಳ್ಳಬೇಕು ಎಂದು ಅವರು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಮನವಿಗೆ ಸ್ಪಂದಿಸದಿದ್ದಲ್ಲಿ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

sajidpress

Recent Posts

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

1 hour ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

2 hours ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

15 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

15 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

15 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420