ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ತಾಲೂಕು ಪಿಂಜಾರ ಸಂಘದಿಂದ ಪ್ರತಿಭಟನೆ

ಸುರಪುರ: ತಾಲೂಕು ಪಿಂಜಾರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರಕ್ಕೆ ಆಗ್ರಹಿಸಿದರು.

ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಆವರಣದಿಂದ ದರಬಾರ ರಸ್ತೆ ಮೂಲಕ ಮಹಾತ್ಮ ಗಾಂಧಿ ವೃತ್ತದಿಂದ ತಹಸೀಲ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಹೋರಾಟಗಾರರು ಸರಕಾರದ ವಿರುಧ್ಧ ಘೋಷಣೆಗಳನ್ನು ಕೂಗುತ್ತಾ ತಮ್ಮ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ನಂತರ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸಂಘದ ರಾಜ್ಯಾಧ್ಯಕ್ಷ ಡಾ: ಅಬ್ದುಲ್ ರಜಾಕ್ ಮಾತನಾಡಿ,ಇಂದು ನಮ್ಮ ಪಿಂಜಾರ ಸಮುದಾಯವನ್ನು ಸರಕಾರಗಳು ಕಡೆಗಣಿಸಿ ಸರಕಾರದ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುತ್ತಿವೆ.ನಾವು ಅನೇಕ ವರ್ಷಗಳಿಂದ ಹೋರಾಟ ಮಾಡಿ ಪಿಂಜಾರ ನದಾಫ ಸಮುದಾಯದ ಅಭಿವೃಧ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿದರು ಕಡೆಗಣಿಸುತ್ತಿವೆ ಅಲ್ಲದೆ ನಮ್ಮ ಸಮುದಾಯದ ವಿದ್ಯಾರ್ಥಿಗಳ ಶಾಲಾ ದಾಖಲಾತಿಯಲ್ಲಿ ಜಾತಿ ಕಲಮಿನಲ್ಲಿ ಮುಸ್ಲೀಂ ಎಂದೇ ಬರೆಯುತ್ತಿದ್ದಾರೆ.

ಇದಕ್ಕೆ ನಮ್ಮ ವಿರೋಧವಿದ್ದು ನಾವು ಧರ್ಮದಿಂದ ಮುಸ್ಲೀಂ ಆದರೆ ಜಾತಿಯಿಂದ ಪಿಂಜಾರ ಅಥವಾ ನದಾಫರಾಗಿದ್ದು ಜಾತಿ ಕಾಲಮಿನಲ್ಲಿ ಪಿಂಜಾರ ಎಂದೇ ಬರೆಯಲು ಕ್ರಮ ಕೈಗೊಳ್ಳಬೇಕು.ಅಲ್ಲದೆ ನಮ್ಮ ಸಮುದಾಯದ ಏಳಿಗೆಯ ಕುರಿತು ಸಿ.ಎಸ್.ದ್ವಾರಕಾನಾಥ ಅವರ ವರದಿಯನ್ನು ಜಾರಿಗೊಳಿಸುವ ಜೊತೆಗೆ ಅಭಿವೃಧ್ಧಿ ಸ್ಥಾಪಿಸಬೇಕೆಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಟಿಪ್ಪು ಸುಲ್ತಾನ ಕ್ರಾಂತಿ ಸೈನ್ಯದ ಅಧ್ಯಕ್ಷ ಖಾಜಾಂಬರ್ ನದಾಫ್ ಬಾಗೇವಾಡಿ ಮಾತನಾಡಿದರು.ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಸಿರಸ್ತೆದಾರ್ ನಿಸಾರ್ ಅಹ್ಮದ್ ಅವರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಅಬ್ದುಲ್‌ಸಾಬ್ ನದಾಫ್ ಬಾವಸಾಬ್ ನದಾಫ್ ಪರಸನಹಳ್ಳಿ ಸೋಪಿಸಾಬ್ ನದಾಫ್ ಸೂಗುರು ಮಹ್ಮದ್ ರಫೀಕ್ ನದಾಫ್ ಹುಸೇನಸಾಬ್ ಮಾಳೂರ ಹುಸೇನಸಾಬ್ ಗೌಂಡಿ ದಸ್ತಗೀರಸಾಬ್ ಕಕ್ಕಲದೊಡ್ಡಿ ಮಹ್ಮದ ಲಾಲಸಾಬ್ ನದಾಫ್ ಇಬ್ರಾಹಿಂ ಯಡಿಯಾಪುರ ಅಬ್ದುಲ್ ನದಾಫ್ ಬಂದೇನವಾಜ ನದಾಫ್ ಸೇರಿದಂತೆ ಅನೇಕರಿದ್ದರು.

sajidpress

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

13 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

13 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

13 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

13 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

13 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420