ಸುರಪುರ: ತಾಲೂಕಿನ ತಿಂಥಣಿಯ ಶ್ರಿ ಮೌನೇಶ್ವರ ದೇವಸ್ಥಾನದಲ್ಲಿ ಅಧಿಕ ಮಾಸ ಹಾಗು ಲೋಕ ಕಲ್ಯಾಣಕ್ಕಾಗಿ ಗಣ ರುದ್ರ ಹೋಮ ಹಾಗು ಮಹಾ ಯಾಗ ನಡೆಸಲಾಯಿತು.
ಈ ಸಂದರ್ಭದಲ್ಲಿ ಮೌನೇಶ್ವರ ದೇವಸ್ಥಾನದ ಅರ್ಚಕ ಶ್ರೀ ಮೌನೇಶ್ವರ ಅರ್ಚಕರು ಮಾತನಾಡಿ,ಅಧಿಕ ಮಾಸದ ಅಂಗವಾಗಿ ದೇವಸ್ಥಾನದಲ್ಲಿ ಗಣ ರುದ್ರ ಹೋಮ ಹಾಗು ಮಹಾ ಯಾಗವನ್ನು ನಡೆಸಲಾಗುತ್ತದೆ.ಇದರ ಮೂಲಕ ಲೋಕಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿ ನಿರ್ಮೂಲನೆಯಾಗಲಿ ಹಾಗು ನಾಡಿಗೆ ಮಳೆ ಬೆಳೆ ಚೆನ್ನಾಗಿ ಬಂದು ಜನತೆ ಸುಖ ಸಂತೋಷದಿಂದ ಬದುಕುವಂತಾಗಲಿದೆ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಬೆಳಿಗ್ಗೆ ೬ ಗಂಟೆಗೆ ಆರಂಭವಾದ ಹೋಮ ಯಾಗ ಕಾರ್ಯಕ್ರಮದ ಆರಂಭದಲ್ಲಿ ಸುತ್ತ ಮುತ್ತಲಿನ ನೂರಾರು ಸಂಖ್ಯೆಯ ಭಕ್ತಾದಿಗಳು ಸೇರಿ ನದಿಯಿಂದ ನೀರು ತಂದು ಪೂಜೆಯ ಜೊತೆಗೆ ಮಹಿಳೆಯರಿಂದ ಕುಂಬ ಕಳಸಗಳ ಮೆರವಣಿಗೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ತಿಂಥಣಿ ಬಂಡೊಳ್ಳಿ ಕಕ್ಕೇರಾ ದೇವಾಪುರ ಅರಳಹಳ್ಳಿ ಸೇರಿದಂತೆ ಅನೇಕ ಗ್ರಾಮಗಳ ಜನರು ಭಾಗವಹಿಸಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…