ವಾಟಾಳ್ ನಾಗರಾಜ್ ಸೇರಿ ಶಿಕ್ಷಕರ ಕ್ಷೇತ್ರದ ಚುನಾವಣೆಗೆ 9 ನಾಮಪತ್ರ ಸಲ್ಲಿಕೆ

0
28

ಕಲಬುರಗಿ: ಅಕ್ಟೋಬರ್ 28 ರಂದು ನಡೆಯುವ ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಗುರುವಾರ ಒಟ್ಟು 9 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಕ್ಷೇತ್ರದ ಚುನಾವಣಾಧಿಕಾರಿಗಳಾದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ ಅವರು ತಿಳಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿ ನಿಂಗಯ್ಯ ಮಠ ಅವರು 2 ನಾಮಪತ್ರ, ಪಕ್ಷೇತರ ಅಭ್ಯರ್ಥಿ ತುಳಸಪ್ಪ ದಾಸರ್ ಅವರು 1 ನಾಮಪತ್ರ, ಜನತಾದಳ (ಜಾತ್ಯಾತೀತ) ಪಕ್ಷದಿಂದ ತಿಮ್ಮಯ್ಯ ಪುರ್ಲೆ ಅವರು 3 ನಾಮಪತ್ರ, ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ವಾಟಾಳ್ ನಾಗರಾಜ್ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಡಾ. ಚಂದ್ರಕಾಂತ ಶಿಂಗೆ 1 ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಪ್ರಭುಲಿಂಗಯ್ಯ ಅವರು 1 ನಾಮಪತ್ರವನ್ನು ಸಲ್ಲಿಸಿದ್ದಾರೆ.

Contact Your\'s Advertisement; 9902492681

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಇದೂವರೆಗೆ ಒಟ್ಟಾರೆ 8 ಅಭ್ಯರ್ಥಿಗಳಿಂದ 16 ನಾಮಪತ್ರ ಸಲ್ಲಿಕೆಯಾದಂತಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here