ಕಲಬುರಗಿ: ಉತ್ತರ ಪ್ರದೇಶದ ಯುವತಿಯ ಮೇಲೆ ನಡೆದ ಅತ್ಯಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ ಕೂಡಲೇ ರಾಜೀನಾಮೆ ಕೊಡಬೇಕು’ ಎಂದು ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಆಗ್ರಹಿಸಿದರು.
ಸೇಡಂ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಎದುರು ಆಯೋಜಿಸಿದ್ಧ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅತ್ಯಾಚಾರಕ್ಕೆ ಒಳಗಾದ ಯುವತಿಯ ಕುಟುಂಬ ದವರನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ ಅವರನ್ನು ತಡೆದ ಸರ್ಕಾರ ಅಮಾನವೀಯ ರೀತಿಯಲ್ಲಿ ವರ್ತನೆ ಮಾಡಿದೆ. ಅಲ್ಲದೆ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾತ್ರೋ ರಾತ್ರಿ ಯುವತಿಯ ದೇಹವನ್ನು ಸುಟ್ಟು ಅಮಾನವೀಯ ರೀತಿಯಲ್ಲಿ ವರ್ತಿಸಿದೆ. ಅತ್ಯಾಚಾರಿಗಳನ್ನು ಶಿಕ್ಷಿಸದ ಸರ್ಕಾರ ಪ್ರೋತ್ಸಾಹ ಕೊಡುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಯೋಗಿ ಆದಿತ್ಯನಾಥ ಅವರಿಗೆ ಈ ಘಟನೆಗೆ ಸಂಬಂಧಿಸಿದಂತೆ ಸೂಚನೆ ಕೊಡಬೇಕಿತ್ತು. ಪ್ರಧಾನಿಯೇ ಮೌನ ವಹಿಸಿರುವುದು ನಾಚಿಕೇಡಿತನ’ ಎಂದರು.
ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಪ್ಪು ಮಾಸ್ಕ್ ಧರಿಸಿ ಬೆಳಿಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ಮೌನ ಸತ್ಯಾಗ್ರಹ ನಡೆಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ವರರಾವ ಮಾಲಿ ಪಾಟೀಲ, ಕಾಡಾ ಮಾಜಿ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಕಾಂಗ್ರೆಸ್ ಮುಖಂಡ ರಾಜಶೇಖರ್ ಪುರಾಣಿಕ್, ಸುಭಾಶ್ಚಂದ್ರ ನಿಷ್ಠಿ, ಹೇಮಾರೆಡ್ಡಿ ಕಲಕಂಭ, ಜಗನ್ನಾಥ ಚಿಂತಪಳ್ಳಿ, ಸತೀಶ ಪೂಜಾರಿ, ಅನಂತಯ್ಯ ಮುಸ್ತಾಜರ್, ವಿಲಾಸ್ ಗೌತಂ, ಸಿದ್ದು ಬಾನಾರ್, ಭೀಮರಾವ ಅಳ್ಳೊಳ್ಳಿ, ಅಶೋಕ ದಂಡೋತಿ, ನಾಗರಾಜ ನಂದೂರ, ಅಂಕಿತ್ ಜೋಶಿ, ವೀರೇಂದ್ರ ರುದ್ನೂರ, ಮಹಾದೇವಪ್ಪ ಪೊಲೀಸ್ ಪಾಟೀಲ, ರಷೀದ್ ರಂಜೋಳ, ಮಾರುತಿ ಮುಗುಟಿ ಇದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…