ಪ್ರಕಾಶ ಆಲ್ಹಾಳ ಮೇಲೆ ಹಲ್ಲೆ: ಕ್ರಮಕ್ಕೆ ದಲಿತ ಸಮಿತಿ ಆಗ್ರಹ

0
35

ಸುರಪುರ: ದಲಿತ ಹಕ್ಕುಗಳ ಸಮಿತಿಯ ತಾಲೂಕು ಅಧ್ಯಕ್ಷ ಪ್ರಕಾಶ ಆಲ್ಹಾಳ ಅವರ ಮೇಲೆ ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ವೇದಿಕೆಯ ಮುಖಂಡರು ಪೊಲೀಸ್ ಉಪ ಅಧೀಕ್ಷಕ ವೆಂಕಟೇಶ ಹುಗಿಬಂಡಿಯವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಾಮೂಹಿಕ ಸಂಘಟನೆಗಳ ವೇದಿಕೆ ಮುಖಂಡರು ಮಾತನಾಡಿ,ಆಲ್ಹಾಳ ಗ್ರಾಮದಲ್ಲಿ ನಡೆದ ಸಹಕಾರ ಸಂಘದ ಚಿನಾವಣೆಯಲ್ಲಿ ಪ್ರಕಾಶ ಆಲ್ಹಾಳ ಅವರ ಕಡೆಯವರು ಜಯಗಳಿಸಿ ಸವರ್ಣಿಯರು ಸೋಲು ಕಂಡಿದ್ದು ಇದರ ಸೇಡಿಗಾಗಿ ಅವರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಲಾಗಿದೆ.

Contact Your\'s Advertisement; 9902492681

ಆದ್ದರಿಂದ ಪ್ರಕಾಶ ಆಲ್ಹಾಳ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದವರ ಮೇಲೆ ಜಾತಿ ನಿಂದನೆ ಪ್ರಕರಣದಡಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ದೇವಿಂದ್ರಪ್ಪ ಪತ್ತಾರ ಎಸ್.ಎಮ್.ಸಾಗರ ದವಲಸಾಬ್ ನದಾಫ್ ಸೇರಿದಂತೆ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here