ಮಾದಿಗ ಸಮಾಜಕ್ಕೆ ನಗರಸಭೆಯ ಅಧ್ಯಕ್ಷ ಸ್ಥಾನ ನೀಡಲು ಆಗ್ರಹ

 

ಶಹಾಬಾದ: ಸ್ಥಳೀಯ ನಗರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಠ ಜಾತಿ ಮಹಿಳೆ ಮೀಸಲು ಇದ್ದು, ಅತ್ಯಂತ ಹಿಂದುಳಿದ ಸಮಾಜವಾದ ಮಾದಿಗ ಸಮಾಜಕ್ಕೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ನಗರ ಮಾದಿಗ ಸಮಾಜದ ಮುಖಂಡ ಡಿ.ಡಿ.ಓಣಿ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಹಾಗೂ ಮುಖಂಡರಿಗೆ ಒತ್ತಾಯಿಸಿದ್ದಾರೆ.

ಅವರು ಶುಕ್ರವಾರ ಮಾದಿಗ ಸಮಾಜದ ವತಿಯಿಂದ ಜಗದಂಬಾ ಮಂದಿರದ ಸಭಾಂಗಣದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಶಹಾಬಾದ ಪುರಸಭೆಯಿಂದ ನಗರ ಸಭೆಯಾಗಿ ಪರಿವರ್ತನೆಯಾದರೂ ಇಲ್ಲಿಯವರೆಗೆ ದಲಿತ ಸಮುದಾಯದ ಮಾದಿಗ ಸಮಾಜದವರಿಗೆ ಅಧ್ಯಕ್ಷ ಸ್ಥಾನ ದಕ್ಕಿಲ್ಲ. ದಲಿತ ಸಮುದಾಯದ ಎಲ್ಲಾ ವರ್ಗದವರು ಒಂದು, ಎರಡು ಬಾರಿ ಅಧ್ಯಕ್ಷರಾಗಿದ್ದಾರೆ. ಆದರೆ, ದಲಿತ ಸಮೂದಾಯದಲ್ಲಿ ಸಾಮಾಜಿಕವಾಗಿ, ರಾಜಕೀಯವಾಗಿ ಅತ್ಯಂತ ಹಿಂದುಳಿದ ಮಾದಿಗ ಸಮಾಜಕ್ಕೆ ಯಾವುದೆ ಪಕ್ಷ ಈವರೆಗೆ ಆಧ್ಯತೆ ನೀಡಿಲ್ಲ.

ಈ ಹಿಂದೆ ಮಾಜಿ ಸಚಿವ ಸಿ.ಗುರುನಾಥ ಅವರು ಸಚಿವರಾಗಿದ್ದಾಗೆ ಮಾದಿಗ ಸಮಾಜದ ಮೈಲಾರಿ ದಿವಿಟಗಿ ಅವರಿಗೆ ಅಧ್ಯಕ್ಷ ಸ್ಥಾನ ಕಲ್ಪಿಸಬೇಕೆಂದೆ ಧರಣಿ ಸಹ ನಡೆಸಲಾಗಿತ್ತು. ಆದರೆ ಅಂದಿನಿಂದ ಇಂದಿನವರೆಗೆ ಅವಕಾಶ ಸಿಗದೆ, ಸಮಾಜದವರಿಗೆ ಅಧ್ಯಕ್ಷ ಸ್ಥಾನ ಸಿಗದೇ ವಂಚಿತರಾಗಿದ್ದರು. ಸದ್ಯ ಅವಕಾಶ ಕೂಡಿ ಬಂದಿದ್ದು, ಈ ಬಾರಿ ನಗರ ಸಭೆಗೆ ಪರಿಶಿಷ್ಠ ಜಾತಿ ಮಹಿಳೆ ಮೀಸಲು ಬಂದಿದೆ. ನಗರಸಭೆಯಲ್ಲಿ ಪೀರಮ್ಮಾ ಪಗಲಾಪೂರ ಅವರು ಸದಸ್ಯರಾಗಿದ್ದರಿಂದ ಅವರಿಗೆ ಅಧ್ಯಕ್ಷ ಸ್ಥಾನ ಕಲ್ಪಿಸಬೇಕೆಂದು ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಹಾಗೂ ನಗರಸಭೆಯ ಸದಸ್ಯರಿಗೆ ಮನವಿ ಮಾಡಿದರು. ನಗರ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚು ಬಹುಮತ ಇರುವದರಿಂದ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ.ಆದರೆ ಮಾದಿಗ ಸಮಾಜಕ್ಕೆ ಇಲ್ಲಿಯವರೆಗೆ ಸಿಗದ ಸಾಮಾಜಿಕ ನ್ಯಾಯವನ್ನು ಈ ಬಾರಿ ನೀಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶರಣು ಪಗಲಾಪುರ, ಮೋಹನಹರ ಮೇತ್ರಿ, ರವಿ ಬೆಳಮಗಿ, ಶ್ರೀಧರ ಕೊಲ್ಲೂರ, ಸಂತೋಷ ಹುಲಿ, ರಾಹುಲ ಕೋರೆ, ಕಮಲಕಾಂತ ಕಾಂಬಳೆ, ಶ್ರೀಕಾಂತ ದಾಕ್ಷೆ, ಭೀಮರಾಯ ಕನಕನಳ್ಳಿ, ಅಜಯ ಬನೇರ, ಕಾಶೀನಾಥ ಜೀನಕೇರಿ ಉಪಸ್ಥಿತರಿದ್ದರು.

emedia line

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420