ಕರ್ನಾಟಕ ಉರ್ದು ಅಕಾಡೆಮಿಗೆ ನೂತನ ಸದಸ್ಯತ್ವ ಮಂಡಳಿ ರಚನೆಗೆ ಆಗ್ರಹ

ಕಲಬುರಗಿ: ರಾಜ್ಯ ಸರಕಾರ ಕರ್ನಾಟಕ ಉರ್ದು ಅಕಾಡೆಮಿಯ ಸದಸ್ಯ ಮಂಡಳಿ ರದ್ದಾಗಿ ಒಂದು ವರೆ ವರ್ಷಕ್ಕೂ ಅಧಿಕ ಕಾಲ ಕಳೆದಿದ್ದು, ರಾಜ್ಯ ಸರಕಾರ ಇದುವರೆಗೆ ಕರ್ನಾಟಕ ಉರ್ದು ಅಡಮಿಗೆ ನೂತನ ಸದಸ್ಯರ ಮಂಡಳಿ ರಚಿಸದಿರುವುದು ಖಂಡನೀಯ, ಮುಖ್ಯಮಂತ್ರಿಗಳಿಗೆ ಮತ್ತು ರಾಜ್ಯಸರಕಾರಕ್ಕೆ ಉರ್ದು ಅಕಡಮಿಯ ಕಾಳಜಿ ಇಲ್ಲದಿರುವುದು ತೊರಿಸುವಂತಹದಾಗಿದೆ ಎಂದು ಹೈದಾರಾಬಾದ್ ಸೋಷಿಯಲ್ ಜಾಗೃತಿ ಫೋರಂ ಅಧ್ಯಕ್ಷರಾದ ಸಾಜಿದ್ ಅಲಿ ರಂಜೋಳ್ವಿ ಆರೋಪಿಸಿದರು.

ಇತ್ತೀಚಿಕೆ ಕಲ್ಯಾಣ ಕರ್ನಾಟಕ ವಿಮೋಚನ ದಿನದ ಆಂಗವಾಗಿ ಕಲಬುರಗಿಗೆ ಆಮಿಸಿದ ಮುಖ್ಯಮಂತ್ರಿಗಳಿಗೆ ಈ ಕುರಿತು ಮನವರಿಗೆ ಮಾಡಿಕೊಡಲಾಗಿತು, ಆದರೂ ಸಹ ಸರಕಾರದಿಂದ ಈ ಕುರಿತುಯಾವುದೇ ಸಕರಾತ್ಮಕ ಸ್ಪಂದನೆ ಸಿಗುತ್ತಿಲ್ಲ. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಪತ್ರ ಸಲ್ಲಿಸಿದೇವೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಸಹ ಮಾಡಲಾಗಿದೆ ಎಂದು ತಿಳಿಸಿದರು.

ಐತಿಹಾಸಿಕ ಹಿನ್ನೆಲೆಹೊಂದಿರುವ ಉರ್ದು ಭಾಷೆಯನ್ನು ಕಲ್ಯಾಣ ಕರ್ನಾಟಕದಲ್ಲಿ ಎರಡನೇ ದರ್ಜೆಯ ಭಾಷೆಯಾಗಿದೆ. ಇಂತಹ ಮಂಡಳಿಗೆ ಕಳೆದ ಒಂದು ವರ್ಷದಿಂದ ನೂತನ ಸಮಿತಿ ರಚಿಸದಿರುವುದು ಸರಕಾರದ ಈ ನಡೆ ಉರ್ದು ಸಾಹಿತಿ, ಲೇಖಕರು, ಕವಿಗಳು, ಶಿಕ್ಷಕರು ಹಾಗೂ ಭಾಷ ಪ್ರೀಯರಿಗೆ ಭಾರಿ ನೋವು ಉಂಟು ಮಾಡಿದೆ ಎಂದು ಅಸಮಧಾನ ವ್ಯಕ್ತಪಡಿಸಿರು.

ತತಕ್ಷಣ ಉರ್ದು ಅಕಾಡೆಮಿಗೆ ನೂತನ ಸಮಿತಿ ರಚಿಸಿ ಕುಂಠಿತ ವಾಗಿರುವ ಚಟುವಟಿಕೆಗಳನ್ನು ಸರಕಾರ ಮುವರ್ಜಿವಹಿಸಿ ಹೆಚ್ಚು ಒತ್ತು ನೀಡಬೇಕು. ಈ ಕುರಿತು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಬೀದಿಗೆ ಇಳಿದು ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.

ಅಮಜ್ ಜಾವೀದ್, ಫೈಮೊದ್ದೀನ್ ಪೀರಜಾದ, ಸೈಯದ್ ತೌಫೀಕ್ ದೇಸಾಯಿ, ವಹೀದ್ ಅಂಜುಮ್, ಡಾ. ಚಂದಾ ಹುಸೇನಿ, ಶಕೀಲ್ ಸರಡಗಿ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

9 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

9 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

9 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

9 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

9 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420