ಶಹಾಬಾದ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಆಕಾಂಕ್ಷಿಗಳ ಪೈಪೋಟಿ

ಶಹಾಬಾದ:ಕಳೆದ ಎರಡು ವರ್ಷಗಳ ಬಳಿಕ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಗೊಂಡಿದ್ದು, ಇಲ್ಲಿನ ಶಹಾಬಾದ ನಗರಸಭೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪೈಪೋಟಿ ಶುರುವಾಗಿದೆ.

ಇಲ್ಲಿನ ಶಹಾಬಾದ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್.ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮನ್ಯ ವರ್ಗಕ್ಕೆ ಮೀಸಲಾಗಿದೆ.ನಗರಸಭೆಯ ಒಟ್ಟು 27 ಸದಸ್ಯ ಸ್ಥಾನಗಳಲ್ಲಿ 18 ಕಾಂಗ್ರೆಸ್, 3 ಪಕ್ಷೇತರ ಸೇರಿಕೊಂಡು 21 ಸ್ಥಾನ, 5 ಬಿಜೆಪಿ ಸ್ಥಾನಗಳಲ್ಲಿ ಒಬ್ಬ ಸದಸ್ಯರ ಮರಣ ಹೊಂದಿದ್ದರಿಂದ ಸದಸ್ಯ ಬಲ 4 ಕ್ಕೆ ಇಳಿದಿದೆ. ಜೆಡಿಎಸ್-1 ಸ್ಥಾನ ಹೊಂದಿದ್ದು, ಪೂರ್ಣ ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯುವುದು ಮಾತ್ರ ಶತಸಿದ್ಧ.

ಅಧಿಕಾರಕ್ಕೆ ಬರಲು ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷದಲ್ಲಿ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ 5 ಮಹಿಳಾ ಸದಸ್ಯರಿದ್ದಾರೆ.ಅದರಲ್ಲಿ ನಾಲ್ಕು ಮಹಿಳಾ ಸದಸ್ಯರ ಹೆಸರು ಮಾತ್ರ ಕೇಳಿ ಬರುತ್ತಿದೆ. ವಾರ್ಡ ನಂ.6ರ ಚಂಪಾಬಾಯಿ ರಾಜು ಮೇಸ್ತ್ರಿ , ವಾರ್ಡ ನಂ.7ರ ಲಕ್ಷ್ಮಿಬಾಯಿ ವೆಂಕಟೇಶ ಕುಸಾಳೆ, ವಾರ್ಡ ನಂ.10ರ ಪೀರಮ್ಮ ಬಸಲಿಂಗಪ್ಪ ಪಗಲಾಪೂರ, ವಾರ್ಡ ನಂ.25ರ ಅಂಜಲಿ ಗಿರೀಶ ಕಂಬಾನೂರ ಅವರು ಪೈಪೋಟಿಯಲ್ಲಿದ್ದಾರೆ. ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಹಾಗೂ ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಯಾರ ಪರ ನಿರ್ಧಾರ ಕೈಗೊಳ್ಳಲಿದ್ದಾರೋ ಅವರೇ ನಗರಸಭೆಯ ಅಧ್ಯಕ್ಷ -ಉಪಾಧ್ಯಕ್ಷರಾಗುವುದು ಮಾತ್ರ ಖಚಿತ.

ಸತತವಾಗಿ ಮೂರು ಬಾರಿ ಗೆಲುವು ಸಾಧಿಸಿರುವ ಮತ್ತು ಎರಡು ಬಾರಿ ನಗರಸಭೆಯ ಉಪಾಧ್ಯಕ್ಷರಾಗಿರುವ ವಾರ್ಡ ನಂ. 7ರ ಸದಸ್ಯೆ ಲಕ್ಷ್ಮಿಬಾಯಿ ವೆಂಕಟೇಶ ಕುಸಾಳೆ ಅವರನ್ನು ಬಿಟ್ಟರೇ ಉಳಿದ ಮೂರು ಮಹಿಳಾ ಸದಸ್ಯರು ಪ್ರಥಮ ಬಾರಿ ಗೆಲುವು ಕಂಡವರು ಹಾಗೂ ನಗರಸಭೆಗೆ ಹೊಸಬರು.

ವಾರ್ಡ ನಂ. 6 ರ ಸದಸ್ಯೆ ಚಂಪಾಬಾಯಿ ರಾಜು ಮೇಸ್ತ್ರಿ ಅವರು ಪ್ರಥಮವಾಗಿ ಗೆದ್ದರೂ, ಅವರ ಪತಿ ಮೂರು ನಗರಸಭೆಯ ಮಾಜಿ ಸದಸ್ಯರಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಳಿಬರುತ್ತಿದೆ.

ವಾರ್ಡ ನಂ.10 ರ ಸದಸ್ಯೆ ಪೀರಮ್ಮ ಬಸಲಿಂಗಪ್ಪ ಅವರು ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಶರಣು ಪಗಲಾಪೂರ ಅವರ ತಾಯಿ.ಅವರು ತಮ್ಮ ತಾಯಿಯನ್ನು ಅಧ್ಯಕ್ಷ ಸ್ಥಾನದಲ್ಲಿ ನೋಡಲು ಎಲ್ಲಿಲ್ಲದ ಹರಸಾಹಸ ಪಡುತ್ತಿದ್ದಾರೆ.ಅಲ್ಲದೇ ಇಲ್ಲಯವರೆಗೆ ಮಾದಿಗ ಸಮಾಜದವರಿಗೆ ಪ್ರಾತಿನಿಧ್ಯ ನೀಡಿಲ್ಲವಾದ್ದರಿಂದ ಈ ಬಾರಿ ನೀಡಬೇಕೆಂದು ಒತ್ತಾಯಿಸಲಾಗುತ್ತಿದೆ.

ವಾರ್ಡ ನಂ.25 ರ ಸದಸ್ಯೆ ಅಂಜಲಿ ಕಂಬಾನೂರ ಅವರು ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಅವರ ಪತ್ನಿ ಹಾಗೂ ಮಾಜಿ ಕಾರ್ಮಿಕ ಸಚಿವ ಸಿ.ಗುರುನಾಥ ಅವರ ಸೊಸೆ. ಅಲ್ಲದೇ ರಾಜಕೀಯ ಹಿನ್ನೆಲೆ ಹೊಂದಿದ ಕುಟುಂಬದ ಗಿರೀಶ ಕಂಬಾನೂರ ಅವರು ಅವರು ಈಗಾಗಲೇ ನಗರಸಭೆಯ ಮಾಜಿ ಅಧ್ಯಕ್ಷರಾಗಿದ್ದು, ಈಗ ತಮ್ಮ ಪತ್ನಿಯನ್ನು ಅಧ್ಯಕ್ಷ ಸ್ಥಾನದ ನೀಡಿಸಲು ಮುಂದಾಗಿದ್ದಾರೆ.

ಉಪಾಧ್ಯಕ್ಷ ಸ್ಥಾನ ಸಾಮನ್ಯ ವರ್ಗಕ್ಕೆ ಮೀಸಲಾಗಿದ್ದು, ಸೂರ್ಯಕಾಂತ ಕೋಬಾಳ, ಡಾ.ಅಹ್ಮದ್ ಪಟೇಲ್, ಇನಾಯತಖಾನ ಜಮಾದಾರ ಹಾಗೂ ಮಲ್ಲಿಕಾರ್ಜುನ ವಾಲಿ ಅವರ ಹೆಸರು ಕೇಳಿ ಬರುತ್ತಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ತಲಾ ನಾಲ್ಕು ಜನರ ಆಕಾಂಕ್ಷಿಗಳಲ್ಲಿ ಹೈಕಮಾಂಡ್ ಯಾರಿಗೆ ಮಣೆ ಹಾಕಲಿದ್ದಾರೆ ಎಂದು ಕಾದು ನೋಡಬೇಕಾಗಿದೆ.

 

emedia line

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

11 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

11 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

11 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

12 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

12 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420