ಬೀದರ: ಬೀದರನ ಅಬಕಾರಿ ಇಲಾಖೆಯ ವಿವಿಧ ಘಟಕಗಳಿಂದ ಅಕ್ಟೋಬರ್ 8ರಂದು ವಿವಿಧೆಡೆ ಕಾರ್ಯಾಚರಣೆ ನಡೆಯಿತು.
ಹುಮನಾಬಾದ್ ವಲಯ ವ್ಯಾಪ್ತಿಯ ಚಿಟ್ಟಗುಪ್ಪ ತಾಲ್ಲೂಕಿನ ಭದ್ರಾಪುರ ಗ್ರಾಮದಿಂದ ಸುಮಾರು 2 ಕಿ.ಮೀ ದೂರದಲ್ಲಿನ ಗುಡ್ಡಗಾಡು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಳಿ ಮಾಡಿರುವ ಭೂಮಿಯಲ್ಲಿ ತೊಗರಿ ಬೆಳೆಯ ನಡುವೆ 3 ಅಡಿ ಎತ್ತರದಿಂದ 7 ಅಡಿ ಎತ್ತರವರೆಗಿನ ಸುಮಾರು 212 ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ, ಅವುಗಳನ್ನು ಬುಡ ಸಮೇತ ತೆಗೆದುಹಾಕಿ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು.
ಬೀದರ ಉಪ ವಿಭಾಗದ ಅಬಕಾರಿ ನಿರೀಕ್ಷಕರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ. ದಾಳಿ ವೇಳೆಯಲ್ಲಿ ಅಬಕಾರಿ ನಿರೀಕ್ಷಕರುಗಳಾದ ರವೀಂದ್ರ ಪಾಟೀಲ್, ಆನಂದ ಉಕ್ಕಲಿ, ಕೆ.ಎಸ್. ರಾಜಶೇಖರ, ಅಬಕಾರಿ ಉಪ ನಿರೀಕ್ಷಕರಾದ ಜೆಟ್ಟಪ್ಪಾ, ಸಿಬ್ಬಂದಿ ಅಬಕಾರಿ ರಕ್ಷಕರಾದ ಚಂದ್ರಕಾAತ, ಹುಷೇನ್ ಸಾಬ್,
ವಾಹನ ಚಾಲಕರಾದ ಅಬ್ದುಲ್ ಅತೀಖ್ ಮತ್ತು ಪವನ್, ಅರಣ್ಯ ರಕ್ಷಕ ಸಿದ್ದಲಿಂಗಪ್ಪ ಮತ್ತು ಗ್ರಾಮ ಲೆಕ್ಕಿಗ ಹನುಮೇಶ್ ಇದ್ದರು.
ಈ ಪ್ರಕರಣದಲ್ಲಿ 212 ಗಾಂಜಾ ಗಿಡಗಳು ಮತ್ತು ಒಂದು ಹೀರೋ ಹೊಂಡಾ ಪ್ಯಾಶನ್ ಪ್ರೋ ದ್ವಿ-ಚಕ್ರ ವಾಹನ ವಶಪಡಿಸಿಕೊಂಡಿದ್ದು, ಜಪ್ತುಪಡಿಸಿದ ಮುದ್ದೆಮಾಲೀನ ಅಂದಾಜು ಕಿಮ್ಮತ್ತು 1,00,000 ಆಗುತ್ತದೆ ಎಂದು ಬಕಾರಿ ಇಲಾಖೆಯ ಪ್ರಕಟಣೆ ತಿಳಿಸಿದೆ.
ಕಲಬುರಗಿ; ಪ್ರಾಚೀನ ಭಾರತೀಯ ಜ್ಞಾನ ವ್ಯವಸ್ಥೆಯು ಜೀವನದಲ್ಲಿ ಸವಾರ್ಂಗೀಣ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಸಾಧಿಸಲು ಎಲ್ಲಾ ಸಮಸ್ಯೆಗಳಿಗೆ ಉತ್ತರ ಮತ್ತು…
ಕಲಬುರಗಿ: 'ಕಾವ್ಯ ದೊಂಬರಾಟವಲ್ಲ. ನಿಜವಾದ ಹಸಿವು ಗುರುತಿಸುವುದು ಕಾವ್ಯ' ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಅಭಿಪ್ರಾಯ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…
ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…