ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಣೆ: ಸಿಎಂ ಯಡಿಯೂರಪ್ಪ

0
376

ಬೆಂಗಳೂರು: ಕೋವಿಡ್‌-19 ಸೋಂಕಿನ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಹಲವಾರು ಶಿಕ್ಷಕರು ಕೋವಿಡ್‌-19 ಸೋಂಕಿಗೆ ಒಳಗಾಗಿರುವುದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಟಿಯಿಂದ ಮಧ್ಯಂತರ ರಜೆ ಘೋಷಿಸಿ ಸಿಎಂ ಆದೇಶ ಹೊರಡಿಸಿದ್ದಾರೆ.

Contact Your\'s Advertisement; 9902492681

ನಾಳೆಯಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020 ರವರೆಗೆ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುತ್ತೇನೆ ಎಂದು ಮುಖ್ಯಮಂತ್ರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮೂಲಕ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕ ವರ್ಗದವರೆಲ್ಲರಿಗೂ ಮುಂಚಿತವಾಗಿ ದಸರಾ ಹಬ್ಬದ ಶುಭಾಶಯಗಳು ಸಿಎಂ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here