ಬಿಸಿ ಬಿಸಿ ಸುದ್ದಿ

ಸರಕಾರಿ ನೌಕರರ ಸಂಘದ ಭವನಕ್ಕೆ ಜಾಗ ನೀಡಲು ಮನವಿ

ಶಹಾಬಾದ:ತಾಲೂಕಿನಲ್ಲಿ ಸರಕಾರಿ ನೌಕರರ ಸಂಘದ ಭವನದ ನಿರ್ಮಾಣಕ್ಕೆ ಜಾಗವನ್ನು ನೀಡಬೇಕೆಂದು ಆಗ್ರಹಿಸಿ ತಾಲೂಕಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಉಪತಹಸೀಲ್ದಾರ ಮಲ್ಲಿಕಾರ್ಜುನರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ, ಶಹಾಬಾದ ನೂತನ ತಾಲೂಕು ರಚನೆಯಾದ ನಂತರ ಸರಕಾರಿ ನೌಕರರ ಸಂಘದ ರಚನೆಯಾಗಿದೆ.ಕಳೆದ ಒಂದು ವರ್ಷದಿಂದ ಸಂಘದ ಕಾರ್ಯಚಟುವಟಿಕೆಗಳನ್ನು ಮಾಡಲು ಸ್ವಂತ ಜಾಗವಿಲ್ಲ.ಅಲ್ಲದೇ ಕಟ್ಟಡವಿಲ್ಲ.ಯಾವುದೇ ಕಾರ್ಯಕ್ರಮಗಳು, ಸಭೆಗಳನ್ನು ಮಾಡಬೇಕಾದರೆ ಸರಕಾರಿ ಶಾಲೆಯ ಖಾಲಿ ಇರುವ ಕೋಣೆಯಲ್ಲಿ ಮಾಡುವಂತ ಅನಿವಾರ್ಯತೆ ಎದುರಾಗಿದೆ.ಆದ್ದರಿಂದ ನಮ್ಮ ಸಂಘದ ಚಟುವಟಿಕೆಗಳನ್ನು ನಡೆಸಲು ಮತ್ತು ಕಟ್ಟಡ ನಿರ್ಮಾಣ ಮಾಡಲು ಎರಡು ಎಕರೆ ಜಾಗವನ್ನು ನೀಡಬೇಕೆಂದು ಮನವಿ ಮಾಡಿದರು.

ಸಂಘದ ರಾಜ್ಯ ಪರಿಷತ್ ಸದಸ್ಯ ಶಶಿಕಾಂತ ಭರಣಿ, ಪ್ರಧಾನ ಕಾರ್ಯದರ್ಶಿ ಸಂಜಯ ರಾಠೋಡ,ಖಜಾಂಚಿ ರಮೇಶ ಕುಲಕಣರ್ಿ, ಸದಸ್ಯರಾದ ಡಾ.ಸಂಧ್ಯಾ ಕಾನೇಕರ, ಬಸವರಾಜ ಕೊಳಕೂರ, ಶಾಂತಮಲ್ಲ ಶಿವಭೋ ಇತರರು ಇದ್ದರು.

emedia line

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

4 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

5 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

5 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

5 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

6 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago