ಬಿಸಿ ಬಿಸಿ ಸುದ್ದಿ

ಶಹಾಬಾದನಲ್ಲಿ ಸರಕಾರಿ ಕಛೇರಿಗಳನ್ನು ಪ್ರಾರಂಭಿಸಲು ರಾಜ್ಯಾಧ್ಯಕ್ಷರಿಗೆ ಈರಣ್ಣ ಕೆಂಭಾವಿ ಮನವಿ

ಶಹಾಬಾದ: ರಾಜ್ಯದಲ್ಲಿಯೇ ಅತ್ಯಂತ ಚಿಕ್ಕದಾದ ತಾಲೂಕಾ ಶಹಾಬಾದನಲ್ಲಿ ಸರಕಾರಿ ಕಛೇರಿಗಳನ್ನು ಅತಿ ಶೀಘ್ರವೇ ಪ್ರಾರಂಭಿಸಲು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಸರಕಾರಿ ನೌಕರರ ಸಂಘದ ಶಹಾಬಾದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ ಅವರು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರಿಗೆ ದಾವಣಗೆರೆಯಲ್ಲಿ ಮನವಿ ಪತ್ರ ಸಲ್ಲಿಸಿದರು.

ನಂತರ ಮಾತನಾಡಿದ ಈರಣ್ಣ ಕೆಂಭಾವಿ, ರಾಜ್ಯದಲ್ಲಿ ಹೊಸ ತಾಲೂಕುಗಳು ಉದಯವಾಗಿ ಸುಮಾರು ಎರಡುವರೆ ವರ್ಷ ಕಳೆಯುತ್ತ ಬಂದರೂ, ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ.ಪರಿಣಾಮವಾಗಿ ಜನರು ತಮ್ಮ ಕೆಲಸ, ಕಾರ್ಯಗಳಿಗೆ ಚಿತ್ತಾಪೂರ ತಾಲೂಕಿಗೆ ಅಲೆದಾಡುವುದು ಇನ್ನೂ ತಪ್ಪಿಲ್ಲ.ಆಡಳಿತ ವಿಕೇಂದ್ರೀಕರಣ ಕಾಗದಕ್ಕೆ ಸೀಮಿತವಾಗಿದೆ ಎಂದರು.

ತಹಸೀಲ್ದಾರ, ತಾಪಂ, ಸಿಡಿಪಿಓ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ ಇಲಾಖೆ,ಉಪಖಾಜಾನೆ, ಪೊಲೀಸ್ ಇಲಾಖೆ ಕಛೇರಿಗಳನ್ನು ಹೊರತುಪಡಿಸಿ ಇತರೆ ಇಲಾಖಾ ಕಛೇರಿಗಳು ಈವರೆಗೆ ತಲೆ ಎತ್ತಿಲ್ಲ.ಇದರಿಂದ ಜನರಿಗೆ ಚಿತ್ತಾಪೂರ ತಾಲೂಕಾ ಕೇಂದ್ರಕ್ಕೆ ಮತ್ತೆ ಓಡಾಡುವುದರಿಂದ ತೊಂದರೆಯಾಗುತ್ತಿದೆ. ಅಲ್ಲದೇ ತಾಲೂಕಾ ಕೇಂದ್ರದಲ್ಲಿ ಇರಬೇಕಾದ ಕೃಷಿ ಸಹಾಯಕ ನಿರ್ಧೇಶಕರ ಕಛೇರಿ, ತೋಟಗಾರಿಕೆ ಮತ್ತು ರೇಷ್ಮೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಲೋಕೋಪಯೋಗಿ ಸೇರಿದಂತೆ ಸರಕಾರಿ ನೌಕರರ ಭವನಕ್ಕೆ ಅನುದಾನ ಹಾಗೂ ಜಾಗ ಮಂಜೂರು ಮಾಡಬೇಕು. ಪ್ರೌಢಶಾಲಾ ಶಿಕ್ಷಕರಿಗೆ ಕಾಲೇಜಿಗೆ ಬಡ್ತಿ ನೀಡಬೇಕು. ಅದರಲ್ಲೂ ಶೈಕ್ಷಣಿಕ ಹಿತದೃಷ್ಠಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೇಗನೆ ಪ್ರಾರಂಭ ಮಾಡಬೇಕೆಂದು ಆಗ್ರಹಿಸಿದರು.

ಸರಕಾರಿ ನೌಕರರ ಸಂಘದ ಚಿತ್ತಾಪೂರ ತಾಲೂಕಾಧ್ಯಕ್ಷ ಬಸವರಾಜ ಬಳೊಂಡಗಿ,ಚಿತ್ತಾಪೂರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಪ್ರಮೋದಕುಮಾರ, ಸಂಘದ ರಾಜ್ಯ ಪರಿಷತ್ ಸದಸ್ಯ ಶಶಿಕಾಂತ ಭರಣಿ, ಪ್ರಧಾನ ಕಾರ್ಯದರ್ಶಿ ಸಂಜಯ ರಾಠೋಡ, ಗೌರಾವಾಧ್ಯಕ್ಷ ಸಂತೋಷ ಸಲಗರ, ಖಜಾಂಚಿ ರಮೇಶ ಕುಲಕರ್ಣಿ, ರವಿಕುಮಾರ ರಾಠೋಡ ಇತರರು ಇದ್ದರು.

emedia line

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago