ಜಯ ಕರ್ನಾಟಕ ಸಂಘಟನೆಯ ಮಾಲೂರು ತಾಲ್ಲೂಕು ಅಧ್ಯಕ್ಷ ದಿನೇಶ್ ಗೌಡ ಹುಟ್ಟುಹಬ್ಬ ಹಿನ್ನೆಲೆ ಮಾಸ್ಕ್ ವಿತರಣೆ

0
38
ಮಾಲೂರು: ತಾಲ್ಲೂಕಿನ ಜಯಕರ್ನಾಟಕ ಸಂಘಟನೆಯ ವತಿಯಿಂದ ತಾಲ್ಲೂಕು ಅಧ್ಯಕ್ಷರು, ತಾಲೂಕು ಸಮಾಜ ಸೇವಕರು ಹಾಗೂ ಯುವ ರಾಜಕೀಯ ಮುಖಂಡರು ಆದ ಕೆ.ದಿನೇಶ್ ಗೌಡ ರವರ ಹುಟ್ಟು ಹಬ್ಬವನ್ನ ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಜಯಕರ್ನಾಟಕ ಸಂಘಟನೆಯ ಕಛೇರಿಯಲ್ಲಿ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ತಾಲ್ಲೂಕು ಅಧ್ಯಕ್ಷರ ಹುಟ್ಟು ಹಬ್ಬದ ಹಿನ್ನೆಲೆ ಜಯಕರ್ನಾಟಕ ಸಂಘಟನೆ ವತಿಯಿಂದ ಮಾಲೂರು ನಗರದಲ್ಲಿ ಸಾರ್ವಜನಿಕರಿಗೆ ಕೋವಿಡ್ 19 ಕೊರೊನ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಜೊತೆಗೆ ಸಾರ್ವಜನಿಕರರಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಯಕರ್ನಾಟಕ ತಾಲ್ಲೂಕು ಅಧ್ಯಕ್ಷರಾದ ಕೆ. ದಿನೇಶ್ ಗೌಡರು ಮಾತನಾಡಿ ಇಂದು ನನ್ನ ಹುಟ್ಟು ಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿದಂತಹ ಎಲ್ಲರಿಗೂ ನಾನು ಚಿರಋಣಿಯಾಗಿದ್ದೇನೆ. ಇಂದು ಮಾಲೂರು ಪಟ್ಟಣದಲ್ಲಿ ಸಾರ್ವಜನಿಕರಿಗೆ ಕೊರೊನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ಹಾಗೂ ಸಾರ್ವಜನಿಕರಿಗೆ ನಮ್ಮ ಜಯಕರ್ನಾಟಕ ಸಂಘಟನೆ ವತಿಯಿಂದ ಉಚಿತ ಮಾಸ್ಕ್ ಗಳನ್ನು ವಿತರಿಸಲಾಯಿತು ಎಂದರು.
ಈ ಕಾರ್ಯಕ್ರಮದಲ್ಲಿ ಮಾಲೂರಿನ ಶಾಸಕರಾದ ಕೆ.ವೈ. ನಂಜೇಗೌಡರು, ರಾಮೇಗೌಡರು, ಜಯಕರ್ನಾಟಕ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಕೆ. ದಿನೇಶ್ ಗೌಡರು, ಯುವ ಘಟಕ ಅಧ್ಯಕ್ಷರು ಪ್ರಶಾಂತ್ ಮತ್ತು ರಾಮಮೂರ್ತಿ, ವಿದ್ಯಾರ್ಥಿ ಘಟಕ ಅಧ್ಯಕ್ಷರಾದ ಶಶಿಕೀರ್ತಿ.ಎನ್ ಮತ್ತು   ಹರೀಶ್, ನಿಕೀಲ್, ಮುನಿರಾಜು, ದಿಲೀಪ್, ಪುನೀತ್, ಬಾನು ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here