ಸುರಪುರ: ತಾಲೂಕಿನಲ್ಲಿ ನಿಧಿಗಳ್ಳತನ ನಡೆಯುತ್ತಿವೆ ಎಂದು ಈ ಹಿಂದೆ ಹೇಳಲಾಗುತ್ತಿತ್ತು,ಅಲ್ಲದೆ ಹಂಪಿಯಂತಹ ಐತಿಹಾಸಿಕ ಸ್ಥಳಗಳಲ್ಲಿ ನಿಧಿಗಳು ಇವೆ ಎಂದು ವಿದೇಶಿಗರು ಸ್ಥಳಗಳನ್ನು ಅಗೆಯುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈಗ ತಾಲೂಕಿನಲ್ಲಿ ಮತ್ತೆ ನಿಧಿಗಳ್ಳರ ಹಾವಳಿ ಕಾಣಿಸಿಕೊಂಡಿದೆ.
ತಾಲೂಕಿನ ತಳವಾರಗೇರಾ ಗ್ರಾಮದ ಬಳಿಯ ಗುಡ್ಡದಲ್ಲಿ ನಿಧಿಯನ್ನು ತೆಗೆಯಲಾಗಿದೆ ಎಂದು ಹೇಳಲಾಗುತ್ತಿದೆ. ಗ್ರಾಮದ ಮುಂಬಾಗದ ಗುಡ್ಡದಲ್ಲಿರುವ ವೀರಭದ್ರೇಶ್ವರ ದೇವಸ್ಥಾನದ ಬಳಿಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಯಾರೋ ನಿಧಿ ತೆಗೆದಿದ್ದಾರೆ ಎಂದು ಜನರು ಹೇಳುತ್ತಿದ್ದಾರೆ.ಗುಡ್ಡದಲ್ಲಿ ಚಿಕ್ಕದಾದ ಗುಂಡಿಯೊಂದನ್ನು ತೋಡಲಾಗಿದ್ದು, ಗುಂಡಿಯನ್ನು ಅಗೆದು ನಿಧಿ ತೆಗೆದುಕೊಂಡು ಹೋಗಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಸತ್ಯಾಸತ್ಯತೆಯು ಪೊಲೀಸರ ತನಿಖೆ ಅಥವಾ ಪುರಾತತ್ವ ಇಲಾಖೆ ಉತ್ಖನನ ನಡೆಸಿ ಹೇಳಬೇಕಿದೆ.
ಈ ಸ್ಥಳ ಈಗ ಜನರ ಕುತೂಹಲದ ಸ್ಥಳವಾಗಿದೆ.ಗ್ರಾಮದ ಅನೇಕ ಜನರು ಗುಡ್ಡಕ್ಕೆ ಬಂದು ಅಗೆದ ಸ್ಥಳವನ್ನು ನೊಡುತ್ತಿದ್ದು,ಗುಡ್ಡದಲ್ಲಿ ನಿಧಿ ಇರಬಹುದು ಎಂದು ಜನರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…