ಬಿಸಿ ಬಿಸಿ ಸುದ್ದಿ

ತಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ -ಅಕ್ಟೋಬರ್ 17ರಂದು ಚುನಾವಣೆ ನಿಗದಿ

ಶಹಾಬಾದ: ರಾಜ್ಯದಲ್ಲಿಯೇ ಅತ್ಯಂತ ಚಿಕ್ಕದಾದ ತಾಲೂಕು ಶಹಾಬಾದನ ತಾಪಂಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸರಕಾರ ಮೀಸಲಾತಿ ಪಟ್ಟಿ ಪ್ರಟಿಸಿದ್ದು, ಇದೇ ಅಕ್ಟೋಬರ್ 17 ರಂದು ಚುನಾವಣೆ ನಿಗದಿಪಡಿಸಲಾಗಿದೆ. ಮೀಸಲಾತಿ ಪ್ರಕಟಿಸುತ್ತಿದ್ದಂತೆ ಆಕಾಂಕ್ಷಿಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಇಲ್ಲಿನ ತಾಪಂ ಅಧ್ಯಕ್ಷ ಸ್ಥಾನ- ಪ್ರವರ್ಗ-ಎ ಮಹಿಳೆ, ಉಪಾಧ್ಯಕ್ಷ ಸ್ಥಾನ- ಅನುಸೂಚಿತ ಜಾತಿ ಮಹಿಳೆಗೆ ಮೀಸಲಾಗಿದೆ.ಇದರಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರೂ ಯಾವುದೇ ಅಧಿಕಾರಿವಿಲ್ಲದೇ, ಕೈಕಟ್ಟಿ ಕುಳಿತ್ತಿದ್ದ ಸದಸ್ಯರಲ್ಲಿ ರಾಜಕೀಯ ಚಟುವಟಿಕೆಗಳು ಚುರುಕಾಗಿದೆ.ಇಲ್ಲಿನ ತಾಪಂಯಲ್ಲಿ ಕೇವಲ 3 ಸ್ಥಾನಗಳನ್ನು ಹೊಂದಿದ್ದು, ಅದರಲ್ಲಿ 2 ಕಾಂಗ್ರೆಸ್, 1 ಬಿಜೆಪಿ ಸದಸ್ಯ ಹೊಂದಿದೆ.

ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ : ಅಧ್ಯಕ್ಷ ಸ್ಥಾನವು ಪ್ರವರ್ಗ-ಎ ಮಹಿಳೆಗೆ ಮೀಸಲಾಗಿರುವುದರಿಂದ ಕಾಂಗ್ರೆಸ್ನ ಇಬ್ಬರು ಸದಸ್ಯರು ಪ್ರವರ್ಗ-ಎ ಸೇರಿದವರಾಗಿದ್ದಾರೆ. ಹೊನಗುಂಟಾ ತಾಪಂ ಸದಸ್ಯೆ ಸಂಗೀತಾ ದೇವೆಂದ್ರ ಕಾರೊಳ್ಳಿ, ಮರತೂರ ತಾಪಂ ಸದಸ್ಯೆ ಮೇರಜಾಬೇಗಂ ಶೇರ್ ಅಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿದ್ದು, ಕೇವಲ 4 ತಿಂಗಳ ಅವಧಿಗಾಗಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸನ ಇವರಿಬ್ಬರಲ್ಲಿಯೇ ತೀವ್ರ ಪ್ರಯತ್ನ ಆರಂಭವಾಗಿದೆ.ಆದರೆ ಅಧ್ಯಕ್ಷ ಸ್ಥಾನ ಒಲಿಯಬೇಕಾದರೆ ಶಾಸಕ ಪ್ರಿಯಾಂಕ್ ಖರ್ಗೆ ಅವರ ಆಶೀರ್ವಾದ, ಅಲ್ಲದೇ ಮುಖಂಡ ವಿಜಯಕುಮಾರ ರಾಮಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಶೀದ್ ಮರ್ಚಂಟ್, ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ ಮರತೂರ ಅವರ ಸಹಕಾರದಿಂದ ಸಾಧ್ಯ. ಈಗಾಗಲೇ ಎಪಿಎಂಸಿ ಅಧ್ಯಕ್ಷ ಸ್ಥಾನವನ್ನು ಮರತೂರ ಗ್ರಾಮದ ಸಿದ್ದುಗೌಡ ಅಫಜಲಪೂರಕರ್ ಅವರನ್ನು ನೇಮಕ ಮಾಡಲಾಗಿದ್ದು, ಅದೇ ಗ್ರಾಮದ ಇನ್ನೊಬ್ಬರಿಗೆ ಸ್ಥಾನ ನೀಡದೇ, ಹೊನಗುಂಟಾದ ತಾಪಂ ಸದಸ್ಯೆಗೆ ಅಧ್ಯಕ್ಷ ಸ್ಥಾನ ನೀಡಲಿದ್ದಾರೆ ಎಂದು ಕೇಳಿ ಬರುತ್ತಿದೆ.ಅಲ್ಲದೇ ಶಹಾಬಾದ ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಬರುವುದರಿಂದ ಶಹಾಬಾದನ ಗ್ರಾಮೀಣ ತಾಪಂ ಸದಸ್ಯರೆಂದರೇ ಮರತೂರಿನ  ಮೇರಜಾಬೇಗಂ ಒಬ್ಬರೇ.ಅವರಿಗೆ ಅಧ್ಯಕ್ಷ ಸ್ಥಾನ ಒಲಿಯುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ರಾಜಕೀಯ ಚದುರಂಗದಾಟದ ಲೆಕ್ಕಾಚಾರದಲ್ಲಿ ಅದಲಿ-ಬದಲಿಯೂ ಆಗಬಹುದು.ಅದಕ್ಕೆ ಕಾದು ನೋಡಬೇಕಷ್ಟೇ ?

ಉಪಾಧ್ಯಕ್ಷ ಸ್ಥಾನ ಅವಿರೋಧ ಆಯ್ಕೆ: ಕೇವಲ ಮೂರು ಸದಸ್ಯ ಬಲ ಹೊಂದಿರುವ ತಾಪಂಯಲ್ಲಿ ಇಬ್ಬರು ಪ್ರವರ್ಗ-ಎ ಗೆ ಸೇರಿದವರಾಗಿದ್ದು, ಅವರು ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದರೇ, ಉಪಾಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಮಹಿಳೆಗೆ ಮೀಸಲಾಗಿರುವುದರಿಂದ ಉಳಿದಿರುವ ಒಬ್ಬರೇ ಸದಸ್ಯೆ ಭಂಕೂರಿನ ತಾಪಂ ಸದಸ್ಯೆ ವಿಜಯಲಕ್ಷ್ಮಿ ಸುರೇಶ ಚವ್ಹಾಣ ಪೈಪೋಟಿ ಇಲ್ಲದೇ ಅವಿರೋಧವಾಗಿ ಆಯ್ಕೆಯಾಗುವುದು ಮಾತ್ರ ಖಚಿತವಾಗಿದೆ.

ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿಗಿಳಿದ ಸದಸ್ಯರಲ್ಲಿ ಅಧ್ಯಕ್ಷ ಸ್ಥಾನ ಕಳೆದುಕೊಂಡರೂ, ಸ್ಥಾಯಿ ಸಮಿತಿ ಅಧ್ಯಕ್ಷರಾಗುವುದು ಮಾತ್ರ ಶತಸಿದ್ಧ. ಒಟ್ಟು ಮೂರು ಸದಸ್ಯರು ಒಂದೊಂದು ಸ್ಥಾನವನ್ನು ಪಡೆಯುವುದು ಮಾತ್ರ ಗ್ಯಾರಂಟಿ. ತಾಪಂಯ ಮೂರು ಸ್ಥಾನಗಳು ಮಹಿಳೆಯರೇ ಹೊಂದಿದ್ದು, ಇವರಲ್ಲಿಯೇ ಚುನಾವಣೆ ನಡೆಯುತ್ತಿರುವುದು ಮಾತ್ರ ಸಾರ್ವಜನಿಕರ ನಗುವಿಗೆ ಕಾರಣವಾಗಿದೆ.

emedia line

Recent Posts

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

4 mins ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

14 mins ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

17 mins ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

2 hours ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

2 hours ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

2 hours ago