ಕಲಬುರಗಿ: ಜಿಲ್ಲೆಯಾದ್ಯಂತ ಮಂಗಳವಾರ ತಡರಾತ್ರಿ ವ್ಯಾಪಕ ಮಳೆ ಸುರಿದ ಪರಿಣಾಮ ಜಿಲ್ಲೆಯ ಬಹುತೇಕ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಾದ ಪರಿಣಾಮ ನದಿಗೆ ನೀರು ಹರಿಬಿಡಲಾಗುತ್ತಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ವೃತ್ತದ ಅಧೀಕ್ಷಕ ಅಭಿಯಂತ ಜಗನ್ನಾಥ ಹಾಲಿಂಗೆ ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ 8 ಗಂಟೆಗೆ ಗಂಡೋರಿನಾಲಾ ಜಲಾಶಯಕ್ಕೆ ಒಳಹರಿವು 35000 ಕ್ಯುಸೆಕ್ ನೀರು ಇದ್ದು, 30000 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಆಳಂದ ತಾಲೂಕಿನ ಅಮರ್ಜಾ ಜಲಾಶಯಕ್ಕೆ ಒಳಹರಿವು 15000 ಕ್ಯುಸೆಕ್ ನೀರು ಇದ್ದು, 13000 ಕ್ಯುಸೆಕ್ ನೀರನ್ನು ಬಿಡಲಾಗಿದೆ.
ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜಿಗೆ ಒಳಹರಿವು 70000 ಕ್ಯುಸೆಕ್ ನೀರು ಇದ್ದು, ಅಷ್ಟೆ ಪ್ರಮಾಣದ ನೀರನ್ನು ಭೀಮಾ ನದಿಗೆ ಬಿಡಲಾಗಿದೆ. ಬೆಣ್ಣೆತೋರಾ ಜಲಾಶಯಕ್ಕೆ ಒಳಹರಿವು 80510 ಕ್ಯುಸೆಕ್ ಇದ್ದು, 59350 ಕ್ಯುಸೆಕ್ ನೀರನ್ನು ಹರಿಬಿಡಲಾಗಿದೆ.
ಲೋವರ್ ಮುಲ್ಲಾಮಾರಿ ಜಲಾಶಯಕ್ಕೆ 38500 ಕ್ಯುಸೆಕ್ ನೀರು ಒಳಹರಿವಿದ್ದು, 57000 ಕ್ಯುಸೆಕ್ ನೀರು ಹೊರಬಿಡಲಾಗಿದೆ. ಚಿಂಚೋಳಿ ತಾಲೂಕಿನ ಚಂದ್ರಮಪಳ್ಳಿ ಜಲಾಶಯದ ಒಳ ಹರಿವು 6395 ಕ್ಯುಸೆಕ್ ಇದ್ದರೆ, ಹೊರ ಹರಿವು 6125 ಕ್ಯುಸೆಕ್ ಇದೆ.
ಅಪ್ಪರ ಮುಲ್ಲಾಮಾರಿ ಜಲಾಶಯದಲ್ಲಿ 3020 ಕ್ಯುಸೆಕ್ ನೀರು ಒಳ ಹರಿವಿದ್ದು, ಅಷ್ಟೆ ಪ್ರಮಾಣದ ನೀರು ಹೊರ ಬಿಡಲಾಗಿದೆ. ಮುಂದಿನ 3-4 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ನದಿ ಪಾತ್ರದ ಜನರು ನದಿ ಕಡೆಗೆ ಹೋಗಬಾರದು. ತಮ್ಮ ಜಾನುವಾರಗಳನ್ನು ಸಹ ನದಿ ದಂಡೆಗೆ ಬಿಡದಂತೆ ಹಾಗೂ ತುಂಬಾ ಎಚ್ಚರಿಕೆಯಿಂದಿರುವಂತೆ ಜಗನ್ನಾಥ ಹಾಲಿಂಗೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…