ಬಿಸಿ ಬಿಸಿ ಸುದ್ದಿ

ಪರಿಸರ ಸಮತೋಲನಕ್ಕೆ ಮಾನದಂದಡ ಅನಿವಾರ್ಯ

ಕಲಬುರಗಿ: ಪರಿಸರ ಅಸಮತೋಲನ ಮತ್ತು ವಾತಾವರಣ ಏರುಪೇರು ಆಗುವುದನ್ನು ತಡೆಗಟ್ಟಲು ಮಾನದಂಡಗಳ ಅನಿವಾರ್ಯತೆಯಿದ್ದು ಜನರು ಅದಕ್ಕೆ ತಕ್ಕಂತೆ ತಮ್ಮ ಜೀವನ ಶೈಲಿಯನ್ನು ರೂಪಿಸಿಕೊಂಡರೆ ಮಾತ್ರ ನಮ್ಮ ಪರಿಸರವನ್ನು ಸಧೃಢಗೊಳಿಸಬಹುದಾಗಿದೆ ಎಂದು ಪಿ.ಡಿ.ಎ. ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಅಶೋಕ ಪಾಟೀಲ ತಮ್ಮ ಅಭಿಮತ ವ್ಯಕ್ತಪಡಿಸಿದರು.

ನಗರದ ಇನಸ್ಟಿಟ್ಯೂಟ್ ಆಫ್ ಇಂಜಿನಿಯರ‍್ಸನ್ ವಿಶ್ವೇಶ್ವರಯ್ಯ ಭವನದಲ್ಲಿ ಆಯೋಜಿಸಲಾಗಿದ್ದ “ಇಂಟರ್‌ನ್ಯಾಶನಲ್ ಸ್ಟ್ಯಾಂಡರ‍್ಡ್ ಡೇ – ೨೦೨೦”ರಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ “ಪ್ರೋಟೆಕ್ಟಿಂಗ್ ಪ್ಲಾನಟ್ ವಿತ್ ಸ್ಟ್ಯಾಂಡರ‍್ಡ್’ ಎಂಬ ವಿಷಯದ ಮೇಲೆ ಮಾತನಾಡಿದರು. ಇನಸ್ಟಿಟ್ಯೂಟ್ ಆಫ್ ಇಂಜಿನಿಯರ‍್ಸನ್ ಅದ್ಯಕ್ಷರಾದ ಬಿ.ಎಸ್.ಮೋರೆ ಅವರು ಇಂದಿನ ಪರಿಸರ ಅಸಮತೋಲನ ಹಾಗೂ ಕೋವಿಡ್ – ೧೯ನ ಪರಿಣಾಮ ಕುರಿತು ಮಾತನಾಡುತ್ತ ಇಂದು ನಮ್ಮ ಗೃಹವನ್ನು ಮಾನದಂಡಗಳು ಹಾಗೂ ಅಳತೆಗೋಳುಗಳನ್ನು ಗಮನದಲ್ಲಿಟ್ಟುಕೊಂಡು ಅದನ್ನು ಸಂರಕ್ಷಿಸಬೇಕಾಗಿದೆ ಎಂದು ಹೇಳಿದರು.

ಈ ಸಮಾರಂಭದಲ್ಲಿ ಕಾಶಪ್ಪ ವಾಂಜರಖೇಡೆ, ನಿವೃತ್ತ ಉಪ-ನಿರ್ದೇಶಕರು, ತಾಂತ್ರಿಕ ಶಿಕ್ಷಣ ಇಲಾಖೆ, ಕಲಬುರಗಿ, ಪ್ರಕಾಶ ಹಾರಕೂಡೆ, ಜಂಟಿ ನಿರ್ದೆಶಕರು, ಟೌನ್ ಪ್ಲಾನಿಂಗ್, ಡಾ. ರವೀಂದ್ರ ಮಾಲಿಪಾಟೀಲ, ಪಿ.ಡಿ.ಎ, ಕಾಲೇಜು, ಚಂದ್ರಶೇಖರ ಗುರುಗುಂಟಿ ನಿವೃತ್ತ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು, ಕಲಬುರಗಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.

ಇನಸ್ಟಿಟ್ಯೂಟ್ ಆಫ್ ಇಂಜಿನಿಯರ‍್ಸನ್ ಕಾರ್ಯದರ್ಶಿಗಳಾದ ಡಾ.ಬಾಬುರಾವ ಶೇರಿಕಾರ ಸರ್ವರನ್ನು ಸ್ವಾಗತಿಸಿದರು. ಅದ್ಯಕ್ಷರಾದ ಬಿ.ಎಸ್.ಮೋರೆ ಅಧ್ಯಕ್ಷತೆ ವಹಿಸಿದ್ದರು ಹಾಗೂ ಚಂದ್ರಶೇಖರ ಗುರುಗುಂಟಿ ಇವರು ವಂದಿಸಿದರು.

emedialine

Recent Posts

ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಶಹಾಬಾದ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಖುಷಿಯಿಂದ ಆಟವಾಡಿ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು. ಅವರು…

4 hours ago

ಪಾಲಿಕೆ ಸದಸ್ಯ ಸಚಿನ್ ಶಿರವಾಳಗೆ ಭೀಮನಗೌಡ ಪರಗೊಂಡ ಸನ್ಮಾನ

ಕಲಬುರಗಿ: ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಮಹಾನಗರದ ವಿದ್ಯಾನಗರ ವಾರ್ಡ್ ದ ಮಹಾನಗರ ಪಾಲಿಕೆಯ ಸದಸ್ಯ ಆಗಿರುವ ಸಚಿನ್ ಶಿರವಾಳ ಅವರು…

5 hours ago

ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಎಸ್.ಡಿ ನೇಮಕ

ಕಲಬುರಗಿ: 2009 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ಶರಣಪ್ಪ ಎಸ್.ಡಿ ಅವರು ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ನಿಯೋಕ್ತಗೊಂಡಿದ್ದಾರೆ.…

6 hours ago

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

8 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

8 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420