ಬಿಸಿ ಬಿಸಿ ಸುದ್ದಿ

ಮೂವರು ಬೈಕ್ ಕಳ್ಳರ ಬಂಧನ: 8 ದ್ವೀಚಕ್ರ ವಾಹನ ಸೇರಿ 2.5 ಲಕ್ಷ ಮೌಲ್ಯದ ಸ್ವತ್ತು ವಶ

ಕಲಬುರಗಿ: ನಗರದ ನೇಮಿಸಿದ ಸ್ಟೇಷನ್‌ ಬಜಾರ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳತನ ಸೇರಿ ದರೋಡೆಕೋರರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಚರಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ 8 ದ್ವೀಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಮೋಮಿನಪುರ ನಿವಾಸಿ ಹಣ್ಣಿನ ವ್ಯಾಪಾರಿಯಾದ ಜಹೀರ ಇನಾಯಿತ ಅಲಿಶೇಖ್‌(20), ಬಸವೇಶ್ವರ ಕಾಲೋನಿ ನಿವಾಸಿ ಅಜೇಯ ಶರಣಪ್ಪ (19 )ಹಾಗೂ ಮೆಹೆಬೂಬ್‌ ನಗರ ನಿವಾಸಿ ಆಕಾಶ ಭೀಮಾಶ೦ಕರ (20) ಬಂಧಿತ ಆರೋಪಿಗಳು.

ಪೊಲೀಸ್‌ ಆಯುಕ್ತರಾದ ಎನ್‌, ಸತೀಶ ಕುಮಾರ್‌ ಐಪಿಎಸ್‌ ರವರ ನಿರ್ದೇಶನದ ಮೇರೆಗೆ ಉಪ ಪೊಲೀಸ್‌ ಆಯುಕ್ತರಾದ ಕಿಶೋರ ಬಾಬು ಐ.ಪಿ.ಎಸ್‌ (ಕಾ ಮತ್ತು ಸು) ಹಾಗೂ ಅಪರಾಧ ಮತ್ತು ಸಂಚಾರ ವಿಭಾಗ ಉಪಪೊಲೀಸ್‌ ಆಯುಕ್ತರಾದ ಶ್ರೀಕಾ೦ತ ಕಟ್ಟಿಮನಿ ಮಾರ್ಗದರ್ಶನದ ಸಹಾಯಕ ಪೊಲೀಸ್‌ ಆಯುಕ್ತರು (ಎ) ಉಪ-ವಿಭಾಗದ ಐಪಿಎಸ್‌ ಅಂಶುಕುಮಾರ ರವರುಗಳ ನೇತೃತ್ವದಲ್ಲಿ ಸ್ಟೇಷನ್‌ ಬಹಾರ್‌ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರಾದ ಸಿದ್ದರಾಮೇಶ್ವರ ಗಡೇದ ಠಾಣೆಯ ಸಿಬ್ಬಂದಿಗಳಾದ ನಜ್ಜುಮೊದ್ದೀನ್‌, ಜಯಭೀಮ, ದೇವೆಂದ್ರ, ಮಲ್ಲಣ್ಣಗೌಡ, ಪಿರೋಜ್‌, ಬೊಗೇಶ್‌, ಮೋಶಿನ್‌ ತಂಡ ಕಾರ್ಯಾಚರಣೆ ನಡೆಸಿದೆ.

ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ 8 ದ್ವೀ ಚಕ್ರ ವಾಹನ ಮತ್ತು ಒಂದು ಮೊಬೈಲ್‌ ಫೋನ್‌ ಒಟ್ಟು 2.50.000/-ರೂ ಮೌಲ್ಯದ ಸ್ವತ್ತುಗಳನ್ನು ಪತ್ತೆ ಹಚ್ಚಿ ಒಂದು ಸುಲಿಗೆ ಪ್ರಕರಣ ಮತ್ತು 8 ಮೊಟಾರ್‌ ಸೈಕಲ್‌ ಕಳ್ಳತನ ಪ್ರಕರಣಗಳ ತನಿಖೆ ನಡೆಸಿ ಆರೋಪಿಗಳನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

36 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

39 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

42 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago