ಹೈದರಾಬಾದ್ ಕರ್ನಾಟಕ

ಭಾರಿ ಮಳೆ: 48 ಕಾಳಜಿ ಕೇಂದ್ರ ಸ್ಥಾಪನೆ: ವಿ.ವಿ.ಜ್ಯೋತ್ಸ್ನಾ

ಕಲಬುರಗಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ನಿರಾಶ್ರಿತಗೊಂಡ ಜನರಿಗೆ ಜಿಲ್ಲೆಯಾದ್ಯಂತ 48 ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಕಲಬುರಗಿ, ಕಮಲಾಪೂರ ಹಾಗೂ ಅಫಜಲಪುರ ತಾಲೂಕಿನಲ್ಲಿ ತಲಾ 3, ಆಳಂದ ತಾಲೂಕಿನಲ್ಲಿ 4, ಜೇವರ್ಗಿ ತಾಲೂಕಿನಲ್ಲಿ 1, ಚಿತ್ತಾಪುರ ಮತ್ತು ಸೇಡಂ ತಾಲೂಕಿನಲ್ಲಿ ತಲಾ 5, ಶಹಾಬಾದ ತಾಲೂಕಿನಲ್ಲಿ 4, ಕಾಳಗಿ ತಾಲೂಕಿನಲ್ಲಿ 8 ಹಾಗೂ ಚಿಂಚೋಳಿ ತಾಲೂಕಿನಲ್ಲಿ 12 ಸೇರಿದಂತೆ ಒಟ್ಟಾರೆ 48 ಕಾಳಜಿ ಕೇಂದ್ರ ತೆರೆದು 7603 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬುಧವಾರ ರಾತ್ರಿ 8 ಗಂಟೆ ವರೆಗಿನ ಅಂದಾಜಿನ ಪ್ರಕಾರ ಜಿಲ್ಲೆಯ 4819 ಮನೆಗಳಿಗೆ ಪ್ರವಾಹದ ನೀರು ನುಗ್ಗಿ ಬಟ್ಟೆ-ಪಾತ್ರೆಗಳು ಹಾನಿಗೊಳಗಾಗಿವೆ. 1058 ಮನೆಗಳಿಗೂ ಭೀಕರ ಮಳೆ ಹಾನಿ ಮಾಡಿದೆ. ಇದಲ್ಲದೆ 518 ಜಾನುವಾರಗಳ ಜೀವ ಹಾನಿ ಬಗ್ಗೆಯೂ ವರದಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

77 ಜನರ ರಕ್ಷಣೆ: ಭೀಕರ ಮಳೆಯಿಂದ ಪ್ರವಾಹ ಮತ್ತು ನಡುಗಡ್ಡೆಯಾಗಿ ಗ್ರಾಮ ಮತ್ತು ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಜಿಲ್ಲೆಯ 77 ಜನರನ್ನು ಎನ್.ಡಿ.ಆರ್.ಎಫ್. ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆಯ ತಂಡಗಳು ಸಂರಕ್ಷಿಸಿವೆ. ಜಿಲ್ಲೆಯಲ್ಲಿ ಯಾವುದೇ ಮಾನವ ಪ್ರಾಣ ಹಾನಿ ಸಂಭವಿಸಿಲ್ಲ.

ಚಿತ್ತಾಪೂರ ತಾಲೂಕಿನ ಮಾಲಗತ್ತಿಯಲ್ಲಿ 3, ಶಹಾಬಾದ ಪಟ್ಟಣದ ಜೆ.ಪಿ.ಕಾಲೋನಿ ಪ್ರದೇಶದ 5 ಮತ್ತು ಹಳೆ ಶಹಾಬಾದ ಪ್ರದೇಶದ-6 ಹಾಗೂ ತಾಲೂಕಿನ ಭಂಕೂರ ಗ್ರಾಮದಲ್ಲಿ ಓರ್ವರನ್ನು ರಕ್ಷಿಸಲಾಗಿದೆ. ಸೇಡಂ ತಾಲೂಕಿನಲ್ಲಿ ಸಟಪನಹಳ್ಳಿ ಗ್ರಾಮದಲ್ಲಿ 2 ಮತ್ತು ಮಳಖೇಡ್ ಗ್ರಾಮದಲ್ಲಿ 26 ಜನರನ್ನು ರಕ್ಷಣಾ ತಂಡ ಸಂರಕ್ಷಿಸಿದ್ದಾರೆ.

ಇನ್ನೂ ಚಿಂಚೋಳಿ ತಾಲೂಕಿನ ಗಾರಂಪಳ್ಳಿಯಲ್ಲಿ 13, ಚಿಂಚೋಳಿ ಪಟ್ಟಣ-4 ಐನೊಳ್ಳಿಯಲ್ಲಿ 3 ಹಾಗೂ ಜಟ್ಟೂರು ಗ್ರಾಮದಲ್ಲಿ 14 ಜನರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾತಿಳಿಸಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

18 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

21 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

24 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago