ಲಿಂಗಾಯತ ಸ್ವತಂತ್ರ ಧರ್ಮ ಒಂದು ದಿನದ ಕಾರ್ಯಾಗಾರ ಅ.18ರಂದು

0
37

ಕಲಬುರಗಿ: ಲಿಂಗಾಯತ ಸ್ವತಂತ್ರ ಧರ್ಮ ಜಾಗ್ರತೆ ಹಾಗೂ ಸಂಘಟನೆ ಹಿನ್ನೆಲಡಯಲ್ಲಿ ಇದೇ ಅಕ್ಟೋಬರ್ ೧೮ರಂದು ಆಳಂದ ಪಟ್ಟಣದ ಜಗದ್ಗುರು ತೋಂಟದಾರ್ಯ ಮಠದಲ್ಲಿ ಬೆಳಗ್ಗೆ ೧೦.೩೦ರಿಂದ ಸಂಜೆ ೫ ಗಂಟೆಯವರೆಗೆ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಆರ್.ಜಿ. ಶೆಟಗಾರ ಮತ್ತು ರವೀಂದ್ರ ಶಾಬಾದಿ ತಿಳಿಸಿದರು.

ಉಸ್ತುರಿ-ಧುತ್ತರಗಾಂವ ಮಠದ ಕೋರಣೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಾಗಾರದಲ್ಲಿ ವಿಭಾಗೀಯ ಮತ್ತು ಮಹಾರಾಷ್ಟ್ರದ ಪ್ರಮುಖ ಲಿಂಗಾಯತ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಇಂದಿಲ್ಲಿ ಪ್ರತ್ರುಕಾಗೋಷ್ಠಿಯಲ್ಲಿ ತಿಳಿಸಿದರು.

Contact Your\'s Advertisement; 9902492681

ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟದ ರೂಪುರೇಷೆ, ಲಿಂಗಾಯತ ಜಾತಿ ಪ್ರಮಾಣ ಪತ್ರ ಕೊಡುವುದು, ಲಿಂಗಾಯತ ಒಳಪಂಗಡ (ವೀರಶೈವ) ಸಮಸ್ಯೆ ಹಾಗೂ ಇನ್ನಿತರ ವಿಷಯ ಕುರಿತು ಸಭೆಯಲ್ಲಿ ಚರ್ಚಿಸಿ ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಬಸವರಾಜ ಮೊರಬದ, ಜಗದೀಶ ಪಾಟೀಲ, ಶಶಿಕಾಂತ ಪಸಾರ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here