ಕಲಬುರಗಿ: ಭಾರತ ದೇಶದ ಇತಿಹಾಸದಲ್ಲಿ ಅಚ್ಚು ಅಳಿಯದ ಹಾಗೆ ಛಾಪು ಮೂಡಿಸಿದ ಏಕೈಕ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರು ಅದ್ಬುತ ಜ್ಞಾನಿ, ವಿಜ್ಞಾನಿ, ಅಪ್ರತಿಮ ದೇಶ ಭಕ್ತ ಎಂದು ವಿದ್ಯಾನಗರ ವೇಲಫೇರ ಸೊಸೈಟಿ ಅದ್ಯಕ್ಷ ಮಲ್ಲಿನಾಥ ದೇಶಮುಖ ಬಣಿಸಿದ್ದಾರೆ.
ಇಂದು ಪ್ರಗತಿ ಕಾಲೋನಿಯಲ್ಲಿ ಶ್ರೀ ಶಕ್ತಿ ಮಹಿಳಾ ಅಭಿವೃದ್ಧಿ ಸಂಸ್ಥೆ ಹಮ್ಮಿಕೊಂಡು ಡಾ.ಎ.ಪಿ ಜೆ ಅಬ್ದುಲ್ ಕಲಾಂ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಗುಣ ಹಾಗೂ ಜ್ಞಾನವುಳವರಿಗೆ ಅಧಿಕಾರ ಸಿಕ್ಕರೆ ಅವರು ಅಮರರಾಗುತ್ತಾರೆ ಎಂಬುದಕ್ಕೆ ಕಲಾಂ ಅವರೇ ಜೀವಂತ ಸಾಕ್ಷಿ ಎಂದು ಸೊಸೈಟಿ ಕಾರ್ಯದರ್ಶಿ ಶಿವರಾಜ ಅಂಡಗಿ ಅವರು ಅಭಿಪ್ರಾಯ ಪಟ್ಟರು.
ಶ್ರೀ ಶಕ್ತಿ ಮಹಿಳಾ ಅಭಿವೃದ್ಧಿ ಸಂಸ್ಥೆ ಅದ್ಯಕ್ಷ ರಾದ ವಿಜಯಲಕ್ಷ್ಮಿಶೀಲವಂತ ಅಧ್ಯಕ್ಷತೆ ವಹಿಸಿದ್ದರು, ಶ್ರೀ ದಾಶಿಮಯ್ಯ ಸಮಜ ಸೇವಾ ಬಳಗದ ಪ್ರಧಾನ ಕಾರ್ಯದರ್ಶಿ ವಿನೋದ ಕುಮಾರ ಜನೆವೇರಿ, ರಾಜೇಂದ್ರ ಶೀಲವಂತ, ಮಡಿವಾಳಪ್ಪ ಸಜ್ಜನ, ಆದಪ್ಪ ಸಿಕೇದ್ ರವಿ ರಗಟೆ,ಸಂತೋಷ ನಿಂಬೂರ, ಕಲ್ಯಾಣಪ್ಪ ಪಾಟೀಲ ಮನು ಶೀಲವಂತ, ಶಿವಾನಿ ಶೀಲವಂತ ಸೇರಿದಂತೆ ಇತರರು ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…