ಸುರಪುರ: ಕಳೆದ ನಾಲ್ಕು ದಿನಗಳಿಂದ ಸತತವಾಗಿ ಸುರಿದ ಮಹಾ ಮಳೆಯಿಂದ ತಾಲೂಕಿನ ಜಾಲಿಬೆಂಚಿ ಗ್ರಾಮದ ಊರ ಮುಂದಿನ ಕೆರೆಯ ಕೋಡಿ ಹೊಡೆದಿದ್ದು ನಿರ್ಮಿಸಲಾದ ಸೇತುವೆಯು ಕಿತ್ತಿಕೊಂಡು ಹೋಗಿದೆ.
ಈ ಸೇತುವೆಯ ಮೂಲಕ ನೂರಾರು ರೈತರು ತಮ್ಮ ಹೊಲ ಗದ್ದೆಗಳಿಗೆ ಹೋಗಬೇಕಿದೆ ಅಲ್ಲದೆ ಜನ ಜಾನುವಾರುಗಳು ಕೂಡ ಇದೇ ರಸ್ತೆಯಿಂದ ಹೋಗುವುದರಿಂದ ಈಗ ಜನರ ಓಡಾಟಕ್ಕೆ ತುಂಬಾ ತೊಂದರೆಯುಂಟಾಗಿದೆ.
ಜನರು ತಮ್ಮ ಹೊಲಗಳಿಗೆ ಹೋಗಲು ರಸ್ತೆಯಿಲ್ಲದೆ ಹೊಲದಲ್ಲಿನ ಬೆಳೆಗಳು ಏನಾಗಿವೆ ಎಂದು ಚಿಂತೆಗೀಡಾಗಿದ್ದಾರೆ. ಆದ್ದರಿಂದ ಮಾನ್ಯ ಶಾಸಕರು ಹಾಗು ಜಿಲ್ಲಾ ಪಂಚಾಯತಿಯ ಸದಸ್ಯರು ಗ್ರಾಮದತ್ತ ಗಮನ ಹರಿಸಿ ಆದಷ್ಟು ಬೇಗ ಈ ಸೇತುವೆಯನ್ನು ನಿರ್ಮಿಸಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…