ಪ್ರವಾಹ ಪೀಡಿತ ಮುತ್ತಾಗಾ ಗ್ರಾಮಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಬೇಟಿ ನೀಡಿ

ಶಹಾಬಾದ:ಕಾಗಿಣಾ ನದಿಯಲ್ಲಿ ಉಂಟಾದ ಪ್ರವಾಹದಿಂದ ನಲುಗಿದ ಮುತ್ತಾಗಾ ಗ್ರಾಮಕ್ಕೆ ಶುಕ್ರವಾರ ಚಿತ್ತಾಪೂರ ಶಾಸಕ ಪ್ರಿಯಾಂಕ್ ಖರ್ಗೆ ಬೇಟಿ ನೀಡಿ ಸಂತ್ರಸ್ತರ ಗೋಳು ಆಲಿಸಿದರು.

ಗ್ರಾಮದಲ್ಲಿ ಪ್ರವೇಶಿಸಿದ ಕೂಡಲೇ ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡರು.ಗ್ರಾಮದಲ್ಲಿ ಎರಡು ದಿನಗಳಿಂದ ವಿದ್ಯುತ್ ಇಲ್ಲದೇ ಹಾಗೂ ಕುಡಿಯಲು ನೀರಿಲ್ಲದೇ ತುಂಬಾ ಸಂಕಷ್ಟಕ್ಕೆ ಒಳಗಾಗಿದ್ದೆವೆ.ಅಲ್ಲದೇ ಬೆಳೆದಂತೆ ಬೆಳೆ ಸಂಪೂರ್ಣ ನಾಶವಾಗಿದೆ.ಮನೆಯೆಲ್ಲಾ ಮುಳುಗಿ ಆಹಾರ ಧಾನ್ಯಗಳು ಹಾಗೂ ಸಾಮಾನುಗಳು ನಾಶವಾಗಿವೆ ಎಂದು ಹೇಳುತ್ತ ಕಣ್ಣೀರು ಹಾಕಿದರು.

ಶಾಸಕರು ಗ್ರಾಮದ ಮುಳುಗಡೆಯಾದ ಪ್ರದೇಶದಲ್ಲಿ ಅಧಿಕಾರಿಗಳೊಂದಿಗೆ ಹೋಗಿ ವೀಕ್ಷಣೆ ಮಾಡಿದರು.ಅಲ್ಲದೇ ಇಲ್ಲಿನ ಜನರಿಗೆ ಈಗಾಗಲೇ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ.ಇಲ್ಲಿ ಗಂಜಿ ಕೇಂದ್ರ ತೆಗೆದು ಉತ್ತಮ ಆಹಾರದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿ. ಮನೆಯಲ್ಲಿ ನೀರು ನುಗ್ಗಿ ಅಗತ್ಯ ದಾಖಲೆಗಳು ನಾಶವಾಗಿವೆ. ರೇಷನ್ ಕಾರ್ಡ ಹಾಗೂ ಇತರ ಯಾವುದೇ ದಾಖಲೆಗಳು ನಾಶವಾಗಿದ್ದರೇ ಆದಷ್ಟು ಬೇಗನೆ ಅದನ್ನು ಪರಿಶೀಲಿಸಿ, ಅವರಿಗೆ ಇನ್ನೊಂದು ದಾಖಲೆಗಳನ್ನು ನೀಡುವಂತೆ ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಸೂಚಿಸಿದರು.ಅಲ್ಲದೇ ಮುತ್ತಗಾದ ಹಳೆ ಗ್ರಾಮ ಪ್ರವಾಹ ಬಂದಗಲೊಮ್ಮೆ ಮುಳುಗಡೆಯಾಗುತ್ತಿದ್ದು, ಆ ಪ್ರದೇಶವನ್ನು ಬೇರೆ ಕಡೆ ಸ್ಥಳಾಂತರ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೆನೆ.ಆದರೆ ಅದಕ್ಕೆ ಸಮಯಬೇಕು ಎಂದು ಗ್ರಾಮಸ್ಥರಿಗೆ ಹೇಳಿದರು.

ತಹಶೀಲ್ದಾರ ಸುರೇಶ ವರ್ಮಾ, ಪೌರಾಯುಕ್ತ ಡಾ.ಕೆ.ಗುರುಲಿಂಗಪ್ಪ, ಪಿಐ ಅಮರೇಶ.ಬಿ, ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ಮೃತ್ಯುಂಜಯ್ ಹಿರೇಮಠ, ಬೀಮಣ್ಣ ಸಾಲಿ, ಚಿತ್ತಾಪೂರ ತಾಪಂ ಅಧ್ಯಕ್ಷ ಜಗದೇದರೆಡ್ಡಿ, ಮ.ಅಜಿಂ ಸೇಠ,ಶರಣಗೌಡ ದಳಪತಿ ಭಂಕೂರ, ರೈತ ಸಂಘದ ತಾಲೂಕಾಧ್ಯಕ್ಷ ಬಸವರಾಜ ಕೋರಿ, ಶರಬಣ್ಣ ಮಾವೂರ, ಜಾನಿ ಪಟೇಲ್, ಅಮೀರ ಪಟೇಲ್,ರಾಹುಲ ಜಿರಕಲ್,ಶಿವಮೂರ್ತಿ ಹಾಗೂ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

 

emedia line

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420