ಜೇವರ್ಗಿ: ಪ್ರವಾಹದ ಹಿನ್ನಲೆಯಲ್ಲಿ ಕಂದಾಯ ಸಚಿವರಾದ ಆರ್. ಅಶೋಕ್ ಅವರು ಹಾಗೂ ಜೇವರ್ಗಿ ಶಾಸಕರು ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಅವರು ಕೊನ್ನ ಹಿಪ್ಪರಗಾ ಬ್ರಿಡ್ಜನ್ನು ವೀಕ್ಷಣೆ ಮಾಡಿದರು.
ಅಲ್ಲದೆ ಶಾಸಕರಾದ ಡಾ.ಅಜಯ್ ಸಿಂಗ್ ಅವರು ಸಚಿವರಿಗೆ ಹೆಚ್ಚಿನ ಪರಿಹಾರ ಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.
ಇದೆ ವೇಳೆ ಫಿರೋಜಬಾದನಲ್ಲಿ ಸ್ಥಾಪಿಸಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಜನರಿಗೆ ನೀಡುತ್ತಿರುವ ಊಟದ ವವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯ ಶಾಸಕರು ಹಾಗೂ ಮುಖಂಡರು ಉಪಸ್ಥಿತರಿದ್ದರು.