ಕಲಬುರಗಿ: ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜ್ ನಿಂದ ಶನಿವಾರ ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಮುಂದೆ ಇನ್ನೂ ಹೆಚ್ಚಿನ ನೀರು ಹರಿಬಿಡುವ ಸಾಧ್ಯತೆವಿದ್ದು, ಇದು ಭೀಕರ ಪ್ರವಾಹದ ಮುನ್ಸೂಚನೆ ಯಾಗಿರುತ್ತದೆ. ಆದ್ದರಿಂದ ಜಿಲ್ಲೆಯ ಭೀಮಾ ಹಾಗೂ ಕಾಗಿಣಾ ನದಿ ತೀರದ ದಂಡೆಯ ಅಫಜಲಪೂರ, ಜೇವರ್ಗಿ, ಚಿತ್ತಾಪುರ ಹಾಗೂ ಶಹಾಬಾದ ತಾಲೂಕಿನ ಗ್ರಾಮಸ್ಥರು ಕೂಡಲೆ ಸುರಕ್ಷಿತ ಸ್ಥಳಕ್ಕೆ ತೆರವಂತೆ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಅವರು ತಿಳಿಸಿದ್ದಾರೆ.
ಪ್ರವಾಹದಲ್ಲಿ ಸಿಲುಕಿರುವವರ ಸಂರಕ್ಷಣೆಗೆ ಈಗಾಗಲೆ 2 ಎನ್.ಡಿ.ಆರ್.ಎಫ್. ತಂಡಗಳು ಪ್ರವಾಹ ಪೀಡಿತ ಪ್ರದೇಶದಲ್ಲಿ ಕಾರ್ಯೋನ್ಮುಖವಾಗಿದೆ. ಇದಲ್ಲದೆ ಎಸ್.ಡಿ.ಅರ್.ಎಫ್., ಪೊಲೀಸ್ ಹಾಗೂ ಅಗ್ನಿಶಾಮಕ ದಳ ತಂಡಗಳು ಕ್ಷೇತ್ರದಲ್ಲಿ 24 ಗಂಟೆ ಕಾಲ ಜನರ ಸಂರಕ್ಷಣೆಗೆ ಕಾರ್ಯನಿರ್ಚಹಿಸುತ್ತಿದ್ದಾರೆ.
ಇದಲ್ಲದೆ ಆರ್ಮಿ ಮತ್ತು ಏರ್ ಫೋರ್ಸ್ ತಂಡಗಳು ಜಿಲ್ಲೆಗೆ ಬರಲಿವೆ. ಹೀಗಾಗಿ ಸಾರ್ವಜನಿಕರು ಯಾವುದೇ ಭಯಕ್ಕೆ ಮತ್ತು ಅತಂಕಕ್ಕೆ ಒಳಗಾಗಬಾರದು. ರಕ್ಷಣಾ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುವಂತೆ ವಿ.ವಿ.ಜ್ಯೋತ್ಸ್ನಾ ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…