ಕಲಬುರಗಿ: ನಗರದ ಸಂತೋಷ ಕಾಲೋನಿಯ ಕೆ.ಎಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ನವರಾತ್ರಿ ಉತ್ಸವದ ಆಚರಣೆಯ ಉದ್ಘಾಟನೆ ಮಾಡಿ ಮಾತನಾಡಿದ ಕೆ.ಎಚ್.ಬಿ ಗ್ರೀನ್ ಪಾರ್ಕ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅದ್ಯಕ್ಷ ಸಂಜೀವಕುಮಾರ ಶೆಟ್ಟಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ನವರಾತ್ರಿಯನ್ನು ಒಂಬತ್ತು ದಿನಗಳವರೆಗೆ ಆಚರಿಸಲಾಗುತ್ತದೆ.
ಈ ಒಂಬತ್ತು ದಿನವನ್ನು ದುರ್ಗಾ ದೇವಿಯ ವಿಭಿನ್ನ ಅವತಾರಕ್ಕೆ ಸಮರ್ಪಿಸಲಾಗಿದೆ. ನವರಾತ್ರಿ ಎಂದರೆ ಭಕ್ತಿ ಮತ್ತು ಸಂತೋಷದ ಹಬ್ಬ. ದುರ್ಗಾ ದೇವಿಯ ಒಂಬತ್ತು ರೂಪಕ್ಕೆ ವಿಶೇಷ ಅಲಂಕಾರ ಹಾಗೂ ಆರಾಧನೆಯ ಮೂಲಕ ಹಬ್ಬದ ಸಂಭ್ರಮವನ್ನು ಮೆರೆಯಲಾಗುವುದು. ಒಂಬತ್ತು ದಿನಗಳ ಕಾಲ ಉಪವಾಸ ವ್ರತ ಪೂಜೆಯನ್ನು ಮಾಡಲಾಗುವುದು. ಒಂಬತ್ತು ದಿನಗಳ ಕಾಲ ದಾಂಡಿಯಾ ಮತ್ತು ಗರ್ಬಾ ನೃತ್ಯ ಪ್ರಕಾರಗಳಿಂದ ದೇವಿಗೆ ಸೇವೆ ಸಲ್ಲಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ನಾಗೆಂದ್ರಪ್ಪ ದಂಡೋತಿಕರ, ಸಂಗಮೇಶ ಸರಡಗಿ, ಕೆ.ಎಮ್ ಲೊಕಯ್ಯ, ರಾಜೇಶ ನಾಗಬುಜಂಗೆ, ಶ್ರೀನಿವಾಸ ಬುಜ್ಜಿ, ಡಿ.ವಿ ಕುಲಕರ್ಣಿ, ಶಿವಕಾಂತ ಚಿಮ್ಮಾ, ಶಂಬುಲಿಂಗ ವಾಡಿ, ಸಂತೋಷ ಮಠ, ಚಂದ್ರಕಾಂತ ತಳವಾರ, ರಮೇಶ ಕಟ್ಕೆ, ಸೂರ್ಯಕಾಂತ ಸಾವಳಗಿ, ವಿರೇಶ ಬೋಳಶೆಟ್ಟಿ, ರವೀಂದ್ರ ಗುತ್ತೆದಾರ, ರೇವಣಸಿದ್ದಪ್ಪ ರುದ್ರವಾಡಿ, ಮಶಾಕ ಸಾಬ, ಶರಣಬಸಪ್ಪ ದೇಶಟ್ಟಿ, ಮಲ್ಲಣ್ಣ ಮಲ್ಲೆಡ, ದಿಲೀಪ ಬಕರೆ, ಬಸವರಾಜ ಹೆಳವರ ಯಾಳಗಿ, ರಮೇಶ ಬಸ್ಕಾವರೆ ಹಾಗೂ ಇನ್ನಿತರರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…