ತಾಪಂ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ವಿಜಯಲಕ್ಷ್ಮಿಗೆ ಬಿಜೆಪಿಯಿಂದ ಸನ್ಮಾನ

0
234

ಶಹಾಬಾದ:ನಗರದಲ್ಲಿ ಶನಿವಾರ ನಡೆದ ತಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಹಾಬಾದ ತಾಲೂಕಿನ  ತಾಪಂ  ತಾಪಂ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಭಂಕೂರ ತಾಪಂ ಸದಸ್ಯೆ ವಿಜಯಲಕ್ಷ್ಮಿ ಸುರೇಶ ಚವ್ಹಾಣ  ಅವರಿಗೆ ಶನಿವಾರ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ವತಿಯಿಂದ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಹಾಗೂ ಶಶಿಕಾಂತ ಪಾಟೀಲ ಭಂಕೂರ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ನಂತರ ಮಾತನಾಡಿದ ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ನೂತನ ಶಹಾಬಾದ ತಾಲೂಕಾ ರಚನೆಯಾದ ನಂತರ ತಾಪಂ ಚುನವಣೆಯಲ್ಲಿ  ಬಿಜೆಪಿ ಪಕ್ಷದ ಅಭ್ಯರ್ಥಿ ವಿಜಯಲಕ್ಷ್ಮಿ ಸುರೇಶ ಚವ್ಹಾಣ ಅವರು ಅವಿರೋಧವಾಗಿ ಆಯ್ಕೆಯಾಗಿ ಶಹಾಬಾದ ತಾಲೂಕಿನ ಪ್ರಪ್ರಥಮ ಉಪಾಧ್ಯಕ್ಷರಾಗಿದ್ದಾರೆ.ಕೇವಲ ಕೆಲವೇ ತಿಂಗಳ ಅಧಿಕಾರವಿದ್ದು, ಅದನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ಜನಪರವಾದ ಕೆಲಸ ಮಾಡುವಂತೆ ಹೇಳಿದರು.ಅಲ್ಲದೇ ಮುಂಬರುವ ದಿನಗಳಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನೆ ಕೈಗೊಂಡು ತಾಲೂಕಿನಲ್ಲಿ ಬಿಜೆಪಿ ಸದಸ್ಯರನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪಕ್ಷವನ್ನು ಬಲಿಪಡಿಸಲಾಗುವುದು ಅದಕ್ಕೆ ಎಲ್ಲರ ಸಹಕಾರ ಮುಖ್ಯ ಎಂದರು.

Contact Your\'s Advertisement; 9902492681

ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಭಾಗಿರಥಿ ಗುನ್ನಾಪೂರ, ಮುಖಂಡರಾದ ನಾಗರಾಜ ಮೇಲಗಿರಿ, ನಿಂಗಣ್ಣ ಹುಳಗೋಳಕರ್, ಬಸವರಾಜ ಮದ್ರಕಿ,ವಿಜಯಕುಮಾರ ಮಾಣಿಕ್, ಶಿವುಗೌಡ,ಸಂಜುಕುಮಾರ ಸೂಡಿ, ಚಂದ್ರಕಾಂತ ಗೊಬ್ಬೂರಕರ್,ರವಿ ರಾಠೋಡ, ದತ್ತಾ ಫಂಡ,ಪಾಲ ರಾಠೋಡ, ಲಕ್ಷ್ಮಿಕಾಂತ ಕಂದಗೂಳ,ಬಸವರಾಜ ಬಿರಾದಾರ, ಸಂಜಯ ಕೋರೆ ಸೇರಿದಂತೆ ಅನೇಕ ಜನರು ಉಪಸ್ಥಿತರಿದ್ದರು

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here